ಪೌರಕಾರ್ಮಿಕರು, ನಾಗರಿಕರು, ಸಂಪರ್ಕ ಕಾರ್ಯಕರ್ತರು, ಸ್ವಯಂ ಸೇವಕರು ಸೇರಿ 100ಕ್ಕೂ ಹೆಚ್ಚು ಮಂದಿ ರಂಗೋಲಿ ಹಬ್ಬದಲ್ಲಿ ಪಾಲ್ಗೊಂಡು ವಿವಿಧ ಚಿತ್ತಾರದ ರಂಗೋಲಿಗಳನ್ನು ಬಿಡಿಸಿದರು. ಭಾಗವಹಿಸಿದ್ದ ಎಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ಶಾಸಕ ಕೆ.ಜೆ.ಜಾರ್ಜ್, ಪಾಲಿಕೆ ವಿಶೇಷ ಆಯುಕ್ತ (ಕಸ ನಿರ್ವಹಣೆ) ಡಿ.ರಂದೀಪ್ ವಿತರಿಸಿದರು.