ಇತರ ಜಿಲ್ಲಾ ಕೇಂದ್ರಕ್ಕೆ ಹೋಲಿಸಿದರೆ ಹಾಸನ ಅಭಿವೃದ್ಧಿಯಲ್ಲಿ ಸಂಪೂರ್ಣ ಹಿನ್ನಡೆಯಾಗಿದೆ. ದುದ್ದ ರಸ್ತೆ ಗುಂಡಿ ಬಿದ್ದಿದ್ದು, ಜನ ಸಂಚಾರ ಮಾಡಲು ಪರದಾಡುವಂತಾಗಿದೆ. ದೊಡ್ಡಪುರಕ್ಕೆ ಹೋಗಲು ಸರಿಯಾದ ರಸ್ತೆ ಇಲ್ಲ, ಹಾಸನ ನಗರಕ್ಕೆ ಹೊಂದಿ ಕೊಂಡಂತೆ ಇರುವ ಅನೇಕ ಹಳ್ಳಿಗಳ ರಸ್ತೆಗಳು ಹದಗೆಟ್ಟಿದ್ದರೂ ದುರಸ್ತಿ ಮಾಡಿಲ್ಲ ಎಂದು ಆರೋಪಿಸಿದರು.