<p><strong>ಬೆಂಗಳೂರು</strong>: ‘ಲಾಕ್ಡೌನ್ ಸಂದರ್ಭದಲ್ಲಿ ದಿನಸಿ ತರಲು ಸಹಾಯ ಮಾಡುತ್ತಿದ್ದ ಚಾಲಕ ಸೇರಿ ನಾಲ್ವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿ ನೈಜೀರಿಯಾದ ಯುವತಿಯೊಬ್ಬರು ತಲಘಟ್ಟಪುರ ಠಾಣೆಗೆ ದೂರು ನೀಡಿದ್ದಾರೆ.</p>.<p>'25 ವರ್ಷದ ಯುವತಿ, ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಾರೆ. ಅವರ ದೂರು ಆಧರಿಸಿ ಚಾಲಕ ಶಿವಶಂಕರ್, ಶ್ರೀಧರ್, ಗೋಪಿ, ಹರೀಶ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಎರಡು ತಿಂಗಳ ಹಿಂದಷ್ಟೇ ಯುವತಿಗೆ ಚಾಲಕ ಶಿವಶಂಕರ್ ಪರಿಚಯವಾಗಿತ್ತು. ಆಗಾಗ ಆಕೆ ಮನೆಗೂ ಆತ ಹೋಗಿ ಬರುತ್ತಿದ್ದ. ಸಲುಗೆಯೂ ಇತ್ತು. ಮೇ 10ರಂದು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿಗಳು, ಅತ್ಯಾಚಾರ ಎಸಗಿದ್ದಾರೆ. ಈ ಸಂಗತಿಯನ್ನು ಯುವತಿಯೇ ದೂರಿನಲ್ಲಿ ತಿಳಿಸಿದ್ದಾರೆ.’</p>.<p>‘ದೂರು ದಾಖಲಾಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಯುವತಿ ಹಾಗೂ ಚಾಲಕನ ನಡುವೆ ಹಣಕಾಸಿನ ವ್ಯವಹಾರವಿತ್ತು. ಅದೇ ವಿಚಾರಕ್ಕಾಗಿ ಗಲಾಟೆ ಆಗಿದ್ದು, ಯುವತಿ ಅತ್ಯಾಚಾರ ಆರೋಪ ಮಾಡುತ್ತಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಎಲ್ಲ ಆಯಾಮದಲ್ಲೂ ತನಿಖೆ ಮುಂದುವರಿದಿದೆ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಲಾಕ್ಡೌನ್ ಸಂದರ್ಭದಲ್ಲಿ ದಿನಸಿ ತರಲು ಸಹಾಯ ಮಾಡುತ್ತಿದ್ದ ಚಾಲಕ ಸೇರಿ ನಾಲ್ವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿ ನೈಜೀರಿಯಾದ ಯುವತಿಯೊಬ್ಬರು ತಲಘಟ್ಟಪುರ ಠಾಣೆಗೆ ದೂರು ನೀಡಿದ್ದಾರೆ.</p>.<p>'25 ವರ್ಷದ ಯುವತಿ, ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಾರೆ. ಅವರ ದೂರು ಆಧರಿಸಿ ಚಾಲಕ ಶಿವಶಂಕರ್, ಶ್ರೀಧರ್, ಗೋಪಿ, ಹರೀಶ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಎರಡು ತಿಂಗಳ ಹಿಂದಷ್ಟೇ ಯುವತಿಗೆ ಚಾಲಕ ಶಿವಶಂಕರ್ ಪರಿಚಯವಾಗಿತ್ತು. ಆಗಾಗ ಆಕೆ ಮನೆಗೂ ಆತ ಹೋಗಿ ಬರುತ್ತಿದ್ದ. ಸಲುಗೆಯೂ ಇತ್ತು. ಮೇ 10ರಂದು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿಗಳು, ಅತ್ಯಾಚಾರ ಎಸಗಿದ್ದಾರೆ. ಈ ಸಂಗತಿಯನ್ನು ಯುವತಿಯೇ ದೂರಿನಲ್ಲಿ ತಿಳಿಸಿದ್ದಾರೆ.’</p>.<p>‘ದೂರು ದಾಖಲಾಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಯುವತಿ ಹಾಗೂ ಚಾಲಕನ ನಡುವೆ ಹಣಕಾಸಿನ ವ್ಯವಹಾರವಿತ್ತು. ಅದೇ ವಿಚಾರಕ್ಕಾಗಿ ಗಲಾಟೆ ಆಗಿದ್ದು, ಯುವತಿ ಅತ್ಯಾಚಾರ ಆರೋಪ ಮಾಡುತ್ತಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಎಲ್ಲ ಆಯಾಮದಲ್ಲೂ ತನಿಖೆ ಮುಂದುವರಿದಿದೆ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>