ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಬಿಎಸ್‌ಪಿ ಆಗ್ರಹ

Last Updated 19 ಫೆಬ್ರುವರಿ 2023, 6:53 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಶರಣರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕರ್ನಾಟಕ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದ್ದಾರೆ.

ಇದೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ, ಡಿಸೆಂಬರ್‌ನಲ್ಲಿ ಚಿತ್ರದುರ್ಗದಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಗಿತ್ತು. ಅಲ್ಲಿನ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿತ್ತು. ಅದಾದ ಮೇಲೆ ಫೆಬ್ರುವರಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಪ್ರತ್ಯೇಕ ತನಿಖಾ ಸಂಸ್ಥೆಗೆ ಪ್ರಕರಣ ವಹಿಸಲು ಆಗ್ರಹಿಸಲಾಗಿತ್ತು. ಸಿಐಡಿ ಬದಲಿಗೆ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮುನಿಯಪ್ಪ ಒತ್ತಾಯಿಸಿದ್ದಾರೆ.

‘ಶರಣರಿಗೆ ಜಾತಿಬಲ, ಹಣದಬಲ, ರಾಜಕೀಯ ಬೆಂಬಲ ಇದೆ. ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಅಪಾಯವಿದೆ. ಶರಣರು ಜೈಲಿನಲ್ಲಿದ್ದರೂ ಪೊಲೀಸ್ ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಬೇಕಾದರೆ ಶಿವಮೂರ್ತಿ ಶರಣರನ್ನು ಬಳ್ಳಾರಿ ಅಥವಾ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಒಡನಾಡಿ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ದುರುದ್ದೇಶದಿಂದ ಹಾಕಿರುವ ಎಲ್ಲ ಸುಳ್ಳು ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳಬೇಕು. ಸಂತ್ರಸ್ತ ವಿದ್ಯಾರ್ಥಿನಿಯರ ಕುಟುಂಬ ಹಾಗೂ ಒಡನಾಡಿ ಮುಖ್ಯಸ್ಥರಿಗೆ ಪೊಲೀಸ್‌ ರಕ್ಷಣೆ ಒದಗಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ತನಕವೂ ಹೋರಾಟ ನಡೆಸಲಾಗುವುದು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT