ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಪ್ರವಾಸ ನಾಳೆ

Last Updated 30 ಮಾರ್ಚ್ 2018, 9:57 IST
ಅಕ್ಷರ ಗಾತ್ರ

ಮಂಡ್ಯ: 'ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಾರ್ಚ್‌ 31ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಅಶ್ವಥ್‌ ನಾರಾಯಣ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಮಾರ್ಚ್‌ 31ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರಾಜೇಂದ್ರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಇದೇ ಸಂದರ್ಭದಲ್ಲಿ ಮುಷ್ಠಿ ಅಕ್ಕಿ ಅಭಿಯಾನಕ್ಕೆ ಚಾಲನೆ ನೀಡುವರು. ನಂತರ ಶ್ರೀರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವರು’ ಎಂದು ಹೇಳಿದರು.

ಬೆಳಿಗ್ಗೆ 11.10ಕ್ಕೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವರು. ಮಧ್ಯಾಹ್ನ 12.10ಕ್ಕೆ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ಸಾವಯವ ಕೃಷಿಕರ ಕೂಟ ಮತ್ತು ಕೀರೆಮಡಿ ಮಹಿಳಾ ಕೂಟದ ಸದಸ್ಯರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 1.15ಕ್ಕೆ ರೈತರೊಂದಿಗೆ ಭೋಜನ ಸ್ವೀಕರಿಸುವರು. ಮಧ್ಯಾಹ್ನ 2ಕ್ಕೆ ಶಶಿಕಿರಣ ಸಮುದಾಯ ಭವನದಲ್ಲಿ ನಡೆಯುವ ಮಂಡ್ಯ, ಮೈಸೂರು , ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಶಕ್ತಿಕೇಂದ್ರದ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಗೋಷ್ಠಿಯಲ್ಲಿ ರೈತ ನಾಯಕ ಕೆ.ಎಸ್.ನಂಜುಂಡೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣಗೌಡ, ರೈತ ಮೋರ್ಚ ರಾಜ್ಯ ಘಟಕದ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಪ.ನಾ.ಸುರೇಶ್, ಎಚ್.ಎನ್.ಮಂಜುನಾಥ್, ಕೆ.ಎಸ್.ಮಲ್ಲಿಕಾರ್ಜುನ್‌, ಎಚ್.ಆರ್.ಅರವಿಂದ್, ಕಾರಸವಾಡಿ ಮಹದೇವು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT