‘ಆದೇಶ ಉಲ್ಲಂಘಿಸಿದರೆ ಕ್ರಮ ಏನು?’
‘ತಾಂತ್ರಿಕ ಸಮಿತಿ ವರದಿಯಂತೆ ಕುಡಿಯುವ ನೀರು ಸರಬರಾಜಿಗೆ ಖಾಸಗಿ ಟ್ಯಾಂಕರ್ಗಳ ದರಗಳನ್ನು ನಿಗದಿಪಡಿಸಲಾಗಿದೆ’ ಎಂದಷ್ಟೇ ಜಿಲ್ಲಾಧಿಕಾರಿಯವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಆದೇಶ ಪಾಲಿಸದಿದ್ದರೆ ಮಾಲೀಕರ ವಿರುದ್ಧ ಯಾವ ಕ್ರಮ? ಎಂಬುದನ್ನು ಉಲ್ಲೇಖಿಸಿಲ್ಲ. ‘ದುಪ್ಪಟ್ಟು ದರ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಜನರ ಬಳಿ ಬಂದು ಕಷ್ಟ ಕೇಳಬೇಕು. ರಸ್ತೆಗೆ ಇಳಿದು ಟ್ಯಾಂಕರ್ಗಳ ಪರಿಶೀಲನೆ ನಡೆಸಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದರು.