<p><strong>ರಾಜರಾಜೇಶ್ವರಿನಗರ</strong>: ಪ್ರಾಣಾಯಾಮ, ಧ್ಯಾನ, ಸೂರ್ಯ ನಮಸ್ಕಾರದಿಂದ ಆರೋಗ್ಯವಂತರಾಗಿ ಬದುಕಲು ಸಾಧ್ಯ ಎಂದು ಯೋಗ ಶಿಕ್ಷಕ ಅಮರಪ್ಪ ಮತ್ತು ಶಿಕ್ಷಕಿ ಪದ್ಮಕೃಷ್ಣ ಹೇಳಿದರು.</p>.<p>ಹೇರೋಹಳ್ಳಿಯ ಸಿಂಡಿಕೇಟ್ ಲೇಔಟ್ನ ಓಂ ಸೇವಾಕೇಂದ್ರದಲ್ಲಿ ರಥಸಪ್ತಮಿ ಅಂಗವಾಗಿ ಹಮ್ಮಿಕೊಂಡಿದ್ದ 24ನೇ ವರ್ಷದ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು</p>.<p>76 ವರ್ಷದ ರಾಮಕೃಷ್ಣ ಭಟ್ ಮಾತನಾಡಿ, ಪ್ರತಿನಿತ್ಯ ಪ್ರಾಣಾಯಾಮ, ಸೂರ್ಯನಮಸ್ಕಾರ ಮಾಡುವ ಮೂಲಕ ಆರೋಗ್ಯವಾಗಿದ್ದೇನೆ ಎಂದರು.</p>.<p>ಮರಿಯಪ್ಪನಪಾಳ್ಯದ ಸೇಂಟ್ ಫಿಲೋಮಿನಾ ಶಾಲೆಯ ಆವರಣದಲ್ಲಿ 108 ಸೂರ್ಯ ನಮಸ್ಕಾರ ನಡೆಯಿತು.</p>.<p>ಮುಖಂಡ ಜಯರಾಮು ಮಾತನಾಡಿ, ಕಲುಷಿತ ಗಾಳಿ, ನೀರು, ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಬೊಜ್ಜು, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಬರುತ್ತಿವೆ, ಮಿತ ಆಹಾರ, ಯೋಗ, ಧ್ಯಾನ, ಸೂರ್ಯ ನಮಸ್ಕಾರವೇ ಎಲ್ಲ ರೋಗಗಳಿಗೆ ಪರಿಹಾರ ಎಂದರು.</p>.<p>ಪತಂಜಲಿ ಯೋಗ ಶಿಕ್ಷಕರಾದ ಸರಸ್ವತಿ, ಲಿಂಗರಾಜು ಮಾರ್ಗದರ್ಶನದಲ್ಲಿ 108 ಸೂರ್ಯ ನಮಸ್ಕಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: ಪ್ರಾಣಾಯಾಮ, ಧ್ಯಾನ, ಸೂರ್ಯ ನಮಸ್ಕಾರದಿಂದ ಆರೋಗ್ಯವಂತರಾಗಿ ಬದುಕಲು ಸಾಧ್ಯ ಎಂದು ಯೋಗ ಶಿಕ್ಷಕ ಅಮರಪ್ಪ ಮತ್ತು ಶಿಕ್ಷಕಿ ಪದ್ಮಕೃಷ್ಣ ಹೇಳಿದರು.</p>.<p>ಹೇರೋಹಳ್ಳಿಯ ಸಿಂಡಿಕೇಟ್ ಲೇಔಟ್ನ ಓಂ ಸೇವಾಕೇಂದ್ರದಲ್ಲಿ ರಥಸಪ್ತಮಿ ಅಂಗವಾಗಿ ಹಮ್ಮಿಕೊಂಡಿದ್ದ 24ನೇ ವರ್ಷದ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು</p>.<p>76 ವರ್ಷದ ರಾಮಕೃಷ್ಣ ಭಟ್ ಮಾತನಾಡಿ, ಪ್ರತಿನಿತ್ಯ ಪ್ರಾಣಾಯಾಮ, ಸೂರ್ಯನಮಸ್ಕಾರ ಮಾಡುವ ಮೂಲಕ ಆರೋಗ್ಯವಾಗಿದ್ದೇನೆ ಎಂದರು.</p>.<p>ಮರಿಯಪ್ಪನಪಾಳ್ಯದ ಸೇಂಟ್ ಫಿಲೋಮಿನಾ ಶಾಲೆಯ ಆವರಣದಲ್ಲಿ 108 ಸೂರ್ಯ ನಮಸ್ಕಾರ ನಡೆಯಿತು.</p>.<p>ಮುಖಂಡ ಜಯರಾಮು ಮಾತನಾಡಿ, ಕಲುಷಿತ ಗಾಳಿ, ನೀರು, ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಬೊಜ್ಜು, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಬರುತ್ತಿವೆ, ಮಿತ ಆಹಾರ, ಯೋಗ, ಧ್ಯಾನ, ಸೂರ್ಯ ನಮಸ್ಕಾರವೇ ಎಲ್ಲ ರೋಗಗಳಿಗೆ ಪರಿಹಾರ ಎಂದರು.</p>.<p>ಪತಂಜಲಿ ಯೋಗ ಶಿಕ್ಷಕರಾದ ಸರಸ್ವತಿ, ಲಿಂಗರಾಜು ಮಾರ್ಗದರ್ಶನದಲ್ಲಿ 108 ಸೂರ್ಯ ನಮಸ್ಕಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>