<p><strong>ಬೆಂಗಳೂರು</strong>: ‘ಗ್ರಹಣದ ಕುರಿತು ವೈಜ್ಞಾನಿಕವಾಗಿ ಚಿಂತಿಸುವ ಬದಲು ಜನರಲ್ಲಿ ಮೂಡನಂಬಿಕೆ ಬಿತ್ತಿ ಸಮಾಜವನ್ನು ತಪ್ಪು ದಾರಿಗೆ ಎಳೆಯುವುದನ್ನು ಕೈಬಿಡಿ’ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್.ಮರಿಸ್ವಾಮಿ ಹೇಳಿದರು.</p>.<p>ಮೂಢನಂಬಿಕೆ ವಿರೋಧಿ ಒಕ್ಕೂಟ ಪುರಭವನ ಎದುರು ಮಂಗಳವಾರ ಸಂಜೆ ಆಯೋಜಿಸಿದ್ದ ಚಂದ್ರಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ತಂತ್ರಜ್ಞಾನದಲ್ಲಿ ಆಗುತ್ತಿರುವ ಕ್ರಾಂತಿಯಿಂದ ನಾವು ಸಾಕಷ್ಟು ಮುಂದೆ ಹೋಗಿದ್ದೇವೆ. ಚಂದ್ರಗ್ರಹಣ, ಸೂರ್ಯಗ್ರಹಣವನ್ನು ವೈಜ್ಞಾನಿಕವಾಗಿ ವಿಮರ್ಶಿಸುವ ಸಾಮರ್ಥ್ಯ ಸಂಪಾದಿಸಿದ್ದೇವೆ. ಆದರೆ ಧಾರ್ಮಿಕ, ಜ್ಯೋತಿಷ್ಯದ ನೆಲೆಯಲ್ಲಿ ನೋಡುವ ಮನೋಭಾವ ನಮ್ಮನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಒಕ್ಕೂಟದ ಸಂಚಾಲಕ ಟಿ.ನರಸಿಂಹಮೂರ್ತಿ, ‘2010ರಿಂದಲೂ ಗ್ರಹಣದ ವೇಳೆ ಆಹಾರ ಸೇವಿಸುವ ಜತೆಗೆ ಇದರ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ’ ಎಂದು ಹೇಳಿದರು.</p>.<p>ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ‘ಗ್ರಹಣ ಎನ್ನುವುದು ಸಹಜವಾಗಿ ನಡೆಯುವ ಕ್ರಿಯೆ. ಇದರ ಕುರಿತು ಗೃಹಿಣಿಯರು, ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕೆ ಹೊರತು ಭಯ ಹುಟ್ಟಿಸುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸುಭಾಷ್ ಭರಣಿ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿದರು.</p>.<p>ಇದೇ ವೇಳೆ ಎಗ್ ಬಿರಿಯಾನಿ, ವೆಜಿಟೆಬಲ್ ಬಿರಿಯಾನಿ, ಕಾಯಿ ಹೋಳಿಗೆ, ಸಮೋಸಾ, ಹಣ್ಣುಗಳು, ಬಿಸ್ಕೇಟ್ ಅನ್ನು ಸೇವನೆ ಮಾಡಲಾಯಿತು.</p>.<p>ವಿಜ್ಞಾನಿಗಳು, ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗ್ರಹಣದ ಕುರಿತು ವೈಜ್ಞಾನಿಕವಾಗಿ ಚಿಂತಿಸುವ ಬದಲು ಜನರಲ್ಲಿ ಮೂಡನಂಬಿಕೆ ಬಿತ್ತಿ ಸಮಾಜವನ್ನು ತಪ್ಪು ದಾರಿಗೆ ಎಳೆಯುವುದನ್ನು ಕೈಬಿಡಿ’ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್.ಮರಿಸ್ವಾಮಿ ಹೇಳಿದರು.</p>.<p>ಮೂಢನಂಬಿಕೆ ವಿರೋಧಿ ಒಕ್ಕೂಟ ಪುರಭವನ ಎದುರು ಮಂಗಳವಾರ ಸಂಜೆ ಆಯೋಜಿಸಿದ್ದ ಚಂದ್ರಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ತಂತ್ರಜ್ಞಾನದಲ್ಲಿ ಆಗುತ್ತಿರುವ ಕ್ರಾಂತಿಯಿಂದ ನಾವು ಸಾಕಷ್ಟು ಮುಂದೆ ಹೋಗಿದ್ದೇವೆ. ಚಂದ್ರಗ್ರಹಣ, ಸೂರ್ಯಗ್ರಹಣವನ್ನು ವೈಜ್ಞಾನಿಕವಾಗಿ ವಿಮರ್ಶಿಸುವ ಸಾಮರ್ಥ್ಯ ಸಂಪಾದಿಸಿದ್ದೇವೆ. ಆದರೆ ಧಾರ್ಮಿಕ, ಜ್ಯೋತಿಷ್ಯದ ನೆಲೆಯಲ್ಲಿ ನೋಡುವ ಮನೋಭಾವ ನಮ್ಮನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಒಕ್ಕೂಟದ ಸಂಚಾಲಕ ಟಿ.ನರಸಿಂಹಮೂರ್ತಿ, ‘2010ರಿಂದಲೂ ಗ್ರಹಣದ ವೇಳೆ ಆಹಾರ ಸೇವಿಸುವ ಜತೆಗೆ ಇದರ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ’ ಎಂದು ಹೇಳಿದರು.</p>.<p>ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ‘ಗ್ರಹಣ ಎನ್ನುವುದು ಸಹಜವಾಗಿ ನಡೆಯುವ ಕ್ರಿಯೆ. ಇದರ ಕುರಿತು ಗೃಹಿಣಿಯರು, ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕೆ ಹೊರತು ಭಯ ಹುಟ್ಟಿಸುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸುಭಾಷ್ ಭರಣಿ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿದರು.</p>.<p>ಇದೇ ವೇಳೆ ಎಗ್ ಬಿರಿಯಾನಿ, ವೆಜಿಟೆಬಲ್ ಬಿರಿಯಾನಿ, ಕಾಯಿ ಹೋಳಿಗೆ, ಸಮೋಸಾ, ಹಣ್ಣುಗಳು, ಬಿಸ್ಕೇಟ್ ಅನ್ನು ಸೇವನೆ ಮಾಡಲಾಯಿತು.</p>.<p>ವಿಜ್ಞಾನಿಗಳು, ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>