<p><strong>ಬೆಂಗಳೂರು</strong>: ‘ಮಹಿಳಾ ಉದ್ಯಮಿಗಳಿಗೂ ವೇದಿಕೆ ಜತೆಗೆ ಸೂಕ್ತ ತರಬೇತಿ, ಮಾರ್ಗದರ್ಶನ ದೊರಕಿದರೆ ದೇಶದ ಅಭಿವೃದ್ಧಿಯಲ್ಲಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ’ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರಾದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು.</p>.<p>ಮಲೇಷ್ಯಾದಲ್ಲಿ ನಡೆದಿರುವ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಭಾರತ ನಿಯೋಗದ ನೇತೃತ್ವವಹಿಸಿ ಮಾತನಾಡಿದರು.</p>.<p>‘ಕೆಲವು ಮಹಿಳೆಯರ ಗುಂಪು ಪ್ರತ್ಯೇಕವಾಗಿ ಕೆಲಸ ಮಾಡುತ್ತಿತ್ತು. ಒಟ್ಟಾಗಿ ಬೆಳೆಯಬೇಕು ಎಂಬ ಆಲೋಚನೆಯಲ್ಲಿ ʼಉಬುಂಟು ಒಕ್ಕೂಟʼವನ್ನು ಸ್ಥಾಪಿಸಲಾಯಿತು. ಇಂದು ಉಬುಂಟು 12 ರಾಜ್ಯಗಳ 60ಕ್ಕೂ ಹೆಚ್ಚು ಸಂಘಗಳನ್ನು ಒಳಗೊಂಡಿದ್ದು, 30,000 ಮಹಿಳಾ ಉದ್ಯಮಿಗಳಿಗೆ ಬೆಂಬಲ ನೀಡುತ್ತಿದೆ. ಈ ಒಕ್ಕೂಟದ ಹತ್ತು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾರತದ ನಿಯೋಗವನ್ನು ಪ್ರತಿನಿಧಿಸುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ವಿಶ್ವಸಂಸ್ಥೆಯ ಶೃಂಗಸಭೆಯು ನಮ್ಮ ಉದ್ಯಮಿಗಳಿಗೆ ಜಾಗತಿಕ ಪ್ರತಿನಿಧಿಗಳೊಂದಿಗೆ ಚರ್ಚಿಸಲು, ಮಾರುಕಟ್ಟೆಗಳನ್ನು ಅನ್ವೇಷಿಸಿ ವ್ಯವಹಾರಗಳನ್ನು ವಿಸ್ತರಿಸಲು ಅವಕಾಶ ಒದಗಿಸುತ್ತಿದೆ’ ಎಂದರು.</p>.<p>ಒಕ್ಕೂಟದ ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ, ಜಿಸಿಸಿಐ ಮಹಿಳಾ ವಿಭಾಗದ ಅಧ್ಯಕ್ಷೆ ಗೋವಾದ ಆಶಾ ಅರೋಂಡೇಕರ್, ಧಾರವಾಡದ ವೆಲಾಸ್ಕಾ ಎಂಟರ್ಪ್ರೈಸಸ್ನ ವಿದ್ಯಾವತಿ ಭಾವಿ, ರೀಥಿಂಕ್ ಸ್ನ್ಯಾಕ್ಸ್ನ ಸ್ಥಾಪಕಿ ದೀಪಿಕಾ ಕಿರಣ್, ಮೀಡಿಯಾ ಕನೆಕ್ಟ್ನ ಸಂಸ್ಥಾಪಕರಾದ ದಿವ್ಯಾ ರಂಗೇನಹಳ್ಳಿ, ತುಮಕೂರಿನ ಇಕೋ-ಕಾನ್ ಗ್ರೀನ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ನ ಜಯಲಕ್ಷ್ಮಿ, ಸುಪ್ರೀಂ ಕೋರ್ಟ್ ವಕೀಲರಾದ ನಾಜಿಶ್ ಖಾನ್, ಜಿ.ಪಿ. ನಿಸರ್ಗ ಮತ್ತು ವಿಭಾ ದೇವರಾಜ್ ಭಾರತವನ್ನು ಪ್ರತಿನಿಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಹಿಳಾ ಉದ್ಯಮಿಗಳಿಗೂ ವೇದಿಕೆ ಜತೆಗೆ ಸೂಕ್ತ ತರಬೇತಿ, ಮಾರ್ಗದರ್ಶನ ದೊರಕಿದರೆ ದೇಶದ ಅಭಿವೃದ್ಧಿಯಲ್ಲಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ’ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರಾದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು.</p>.<p>ಮಲೇಷ್ಯಾದಲ್ಲಿ ನಡೆದಿರುವ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಭಾರತ ನಿಯೋಗದ ನೇತೃತ್ವವಹಿಸಿ ಮಾತನಾಡಿದರು.</p>.<p>‘ಕೆಲವು ಮಹಿಳೆಯರ ಗುಂಪು ಪ್ರತ್ಯೇಕವಾಗಿ ಕೆಲಸ ಮಾಡುತ್ತಿತ್ತು. ಒಟ್ಟಾಗಿ ಬೆಳೆಯಬೇಕು ಎಂಬ ಆಲೋಚನೆಯಲ್ಲಿ ʼಉಬುಂಟು ಒಕ್ಕೂಟʼವನ್ನು ಸ್ಥಾಪಿಸಲಾಯಿತು. ಇಂದು ಉಬುಂಟು 12 ರಾಜ್ಯಗಳ 60ಕ್ಕೂ ಹೆಚ್ಚು ಸಂಘಗಳನ್ನು ಒಳಗೊಂಡಿದ್ದು, 30,000 ಮಹಿಳಾ ಉದ್ಯಮಿಗಳಿಗೆ ಬೆಂಬಲ ನೀಡುತ್ತಿದೆ. ಈ ಒಕ್ಕೂಟದ ಹತ್ತು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾರತದ ನಿಯೋಗವನ್ನು ಪ್ರತಿನಿಧಿಸುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ವಿಶ್ವಸಂಸ್ಥೆಯ ಶೃಂಗಸಭೆಯು ನಮ್ಮ ಉದ್ಯಮಿಗಳಿಗೆ ಜಾಗತಿಕ ಪ್ರತಿನಿಧಿಗಳೊಂದಿಗೆ ಚರ್ಚಿಸಲು, ಮಾರುಕಟ್ಟೆಗಳನ್ನು ಅನ್ವೇಷಿಸಿ ವ್ಯವಹಾರಗಳನ್ನು ವಿಸ್ತರಿಸಲು ಅವಕಾಶ ಒದಗಿಸುತ್ತಿದೆ’ ಎಂದರು.</p>.<p>ಒಕ್ಕೂಟದ ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ, ಜಿಸಿಸಿಐ ಮಹಿಳಾ ವಿಭಾಗದ ಅಧ್ಯಕ್ಷೆ ಗೋವಾದ ಆಶಾ ಅರೋಂಡೇಕರ್, ಧಾರವಾಡದ ವೆಲಾಸ್ಕಾ ಎಂಟರ್ಪ್ರೈಸಸ್ನ ವಿದ್ಯಾವತಿ ಭಾವಿ, ರೀಥಿಂಕ್ ಸ್ನ್ಯಾಕ್ಸ್ನ ಸ್ಥಾಪಕಿ ದೀಪಿಕಾ ಕಿರಣ್, ಮೀಡಿಯಾ ಕನೆಕ್ಟ್ನ ಸಂಸ್ಥಾಪಕರಾದ ದಿವ್ಯಾ ರಂಗೇನಹಳ್ಳಿ, ತುಮಕೂರಿನ ಇಕೋ-ಕಾನ್ ಗ್ರೀನ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ನ ಜಯಲಕ್ಷ್ಮಿ, ಸುಪ್ರೀಂ ಕೋರ್ಟ್ ವಕೀಲರಾದ ನಾಜಿಶ್ ಖಾನ್, ಜಿ.ಪಿ. ನಿಸರ್ಗ ಮತ್ತು ವಿಭಾ ದೇವರಾಜ್ ಭಾರತವನ್ನು ಪ್ರತಿನಿಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>