<p><strong>ಬೆಂಗಳೂರು: </strong>ಎಲ್ಲ ಇಲಾಖೆಗಳು, ನಿಗಮ–ಮಂಡಳಿಗಳಲ್ಲಿ 371 ಜೆ ಮೀಸಲಾತಿ ಅಡಿ ಲಭ್ಯವಿರುವ ಹುದ್ದೆಗಳನ್ನು ಗುರುತಿಸಿ, ಮೀಸಲಾತಿ ನಿಗದಿಪಡಿಸುವ ಕೆಲಸವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಆದೇಶಿಸಿದ್ದಾರೆ.</p>.<p>ಕಾಲಬದ್ಧವಾಗಿ ಇವೆಲ್ಲವನ್ನೂ ಮಾಡದೇ ಇದ್ದರೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ.</p>.<p>ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ಎಲ್ಲ ಪದನಾಮದ ಹುದ್ದೆಗಳಿಗೆದುರಾಗಿ ಅನ್ವಯಿಸುವ ಮೀಸಲಾತಿ ನಿಗದಿ ಮಾಡಬೇಕು ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದ ರಚಿಸಿ ಅಧಿಸೂಚನೆ ಹೊರಡಿಸಬೇಕು ಎಂದು ಹೇಳಿದ್ದಾರೆ.</p>.<p>ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳು ಹಾಗೂ ಬೆಂಗಳೂರು ಮಾತ್ರವಲ್ಲದೇ ವಿವಿಧ ಕಡೆಗಳಲ್ಲಿರುವ ನಿಗಮ–ಮಂಡಳಿ ಕಚೇರಿಗಳು, ವಿಧಾನಮಂಡಲ ಸಚಿವಾಲಯ, ವಿಶ್ವವಿದ್ಯಾನಿಲಯಗಳು, ಸರ್ಕಾರದ ವ್ಯಾಪ್ತಿಯಲ್ಲಿರುವ ಸ್ವಾಯತ್ತ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಕೂಡ ಇದನ್ನು ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎಲ್ಲ ಇಲಾಖೆಗಳು, ನಿಗಮ–ಮಂಡಳಿಗಳಲ್ಲಿ 371 ಜೆ ಮೀಸಲಾತಿ ಅಡಿ ಲಭ್ಯವಿರುವ ಹುದ್ದೆಗಳನ್ನು ಗುರುತಿಸಿ, ಮೀಸಲಾತಿ ನಿಗದಿಪಡಿಸುವ ಕೆಲಸವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಆದೇಶಿಸಿದ್ದಾರೆ.</p>.<p>ಕಾಲಬದ್ಧವಾಗಿ ಇವೆಲ್ಲವನ್ನೂ ಮಾಡದೇ ಇದ್ದರೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ.</p>.<p>ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ಎಲ್ಲ ಪದನಾಮದ ಹುದ್ದೆಗಳಿಗೆದುರಾಗಿ ಅನ್ವಯಿಸುವ ಮೀಸಲಾತಿ ನಿಗದಿ ಮಾಡಬೇಕು ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದ ರಚಿಸಿ ಅಧಿಸೂಚನೆ ಹೊರಡಿಸಬೇಕು ಎಂದು ಹೇಳಿದ್ದಾರೆ.</p>.<p>ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳು ಹಾಗೂ ಬೆಂಗಳೂರು ಮಾತ್ರವಲ್ಲದೇ ವಿವಿಧ ಕಡೆಗಳಲ್ಲಿರುವ ನಿಗಮ–ಮಂಡಳಿ ಕಚೇರಿಗಳು, ವಿಧಾನಮಂಡಲ ಸಚಿವಾಲಯ, ವಿಶ್ವವಿದ್ಯಾನಿಲಯಗಳು, ಸರ್ಕಾರದ ವ್ಯಾಪ್ತಿಯಲ್ಲಿರುವ ಸ್ವಾಯತ್ತ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಕೂಡ ಇದನ್ನು ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>