ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಿಟರ್ಸ್‌ ಗಿಲ್ಡ್‌ ಅಧ್ಯಕ್ಷರಾಗಿ ರವಿ ಹೆಗಡೆ ಆಯ್ಕೆ

Last Updated 4 ಆಗಸ್ಟ್ 2022, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ಎಡಿಟರ್ಸ್‌ ಗಿಲ್ಡ್‌ ಆಫ್‌ ಬೆಂಗಳೂರು’ ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್‌ ಪ್ರಧಾನ ಸಂಪಾದಕ ರವಿ ಹೆಗಡೆ ಆಯ್ಕೆಯಾಗಿದ್ದಾರೆ.

ವಿಸ್ತಾರ ನ್ಯೂಸ್‌ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ (ಪ್ರಧಾನ ಕಾರ್ಯದರ್ಶಿ), ‘ಪ್ರಜಾವಾಣಿ’ ಕಾರ್ಯನಿರ್ವಾಹಕ
ಸಂಪಾದಕ ರವೀಂದ್ರ ಭಟ್ಟ (ಕಾರ್ಯದರ್ಶಿ), ವಿಜಯವಾಣಿ ಸಂಪಾದಕ ಕೆ.ಎನ್‌.ಚನ್ನೇಗೌಡ (ಖಜಾಂಚಿ) ಅವರು ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಎಡಿಟರ್ಸ್‌ ಗಿಲ್ಡ್‌ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗಿಲ್ಡ್‌ನ ಹಿಂದಿನ ಅಧ್ಯಕ್ಷರಾದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌, ಸಂಯುಕ್ತ ಕರ್ನಾಟಕ ಸಂಪಾದಕ ಹುಣಸವಾಡಿ ರಾಜನ್‌, ಹೊಸ ದಿಗಂತ ಸಂಪಾದಕ ವಿನಾಯಕ ಭಟ್‌ ಮೂರೂರು, ಉದಯವಾಣಿ ಸಂಪಾದಕ ಬಿ.ಕೆ.ಗಣೇಶ್‌ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT