‘ಬೆಂಗಳೂರಿನ ಶಬನಂ ಡೆವಲಪರ್ಸ್ನ ಉದ್ಯೋಗಿಗಳಾದ ಶೈಲಜಾ ಹಾಗೂ ರವಿ ಅವರ ಮೇಲೆ 2007ರಲ್ಲಿ ಮುಸುಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರು. ಇಬ್ಬರೂ ಮೃತಪಟ್ಟಿದ್ದರು. ‘ರವಿ ಪೂಜಾರಿ’ ಎಂಬ ಭಿತ್ತಿಪತ್ರವನ್ನು ಕಚೇರಿ ಗೋಡೆ ಮೇಲೆ ಅಂಟಿಸಿ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಪೂಜಾರಿ ಭಾಗಿಯಾಗಿದ್ದ ಮಾಹಿತಿ ಇತ್ತು. ಹೀಗಾಗಿ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಯಿತು’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.