ರವಿ ಪೂಜಾರಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾನೆ. ಮಂಗಳೂರಿನ ವಕೀಲ ನೌಶದ್ ಕೊಲೆ ಪ್ರಕರಣ ಹಾಗೂ ಬೆಂಗಳೂರಿನ ವಾಹಿನಿಯೊಂದರ ಮೇಲಿನ ದಾಳಿ ಪ್ರಕರಣ ಸಂಬಂಧ ರವಿ ಪೂಜಾರಿಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ವಿಚಾರಣೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.