<p><strong>ಬೆಂಗಳೂರು: </strong>ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರಿಗೆ ನೀಡಲು ಪ್ರತಿ ಜಿಲ್ಲೆಯಿಂದ ₹ 5 ಲಕ್ಷ ಸಂಗ್ರಹಿಸಲಾಗಿದೆ ಎಂಬ ಅಧಿಕಾರಿಗಳ ದೂರವಾಣಿ ಸಂಭಾಷಣೆ ಕುರಿತು ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದಾರೆ.</p>.<p>‘ಸಚಿವರಿಗೆ ಲಂಚದ ಮೊತ್ತ ಸಂಗ್ರಹಕ್ಕೆ ಸಂಬಂಧಿತ ಚರ್ಚೆ ಬಹಿರಂಗವಾದ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಚಿವರ ವಿರುದ್ಧವೇ ಲಂಚದ ಆರೋಪ ಕೇಳಿಬಂದಿದೆ. ಇದು, ಗಂಭೀರ ಪ್ರಕರಣ. ಮುಖ್ಯಮಂತ್ರಿಯವರು ತಕ್ಷಣವೇ ತನಿಖೆಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಅಬಕಾರಿ ಇಲಾಖೆಯಲ್ಲಿ ಕೆಳಗಿನಿಂದ ಮೇಲಿನವರೆಗೆ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಅಧಿಕಾರಿಗಳ ದೂರವಾಣಿ ಸಂಭಾಷಣೆ ಸಾಕ್ಷ್ಯ ನೀಡುತ್ತಿದೆ. ಸಂಭಾಷಣೆ ನಿಜವಾಗಿದ್ದಲ್ಲಿ ಗೋಪಾಲಯ್ಯ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದೂ ಆಗ್ರಹಿಸಿದ್ದಾರೆ.</p>.<p><strong>ಲಂಚ ಪಡೆದವರಿಗೆ ಶಿಕ್ಷೆ ಇಲ್ಲವೆ: ಎಚ್ಡಿಕೆ ಪ್ರಶ್ನೆ</strong></p>.<p><strong>ಬೆಂಗಳೂರು:</strong>ಸಚಿವ ಗೋಪಾಲಯ್ಯ ಅವರಿಗೆಸಂಬಂಧಿಸಿದ ಆಡಿಯೊ ಪ್ರಕರಣದಲ್ಲಿ ಲಂಚ ಕೊಟ್ಟಿರಬಹುದಾದ ಅಧಿಕಾರಿಗಳಿಗೆ ಶಿಕ್ಷೆ ಇದ್ದರೆ, ಪಡೆದಿರುವವರಿಗೆ ಶಿಕ್ಷೆಯೇ ಇಲ್ಲವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.</p>.<p>ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ದೂರವಾಣಿ ಕರೆಯ ರೆಕಾರ್ಡಿಂಗ್ ಬಹಿರಂಗವಾದ ಬಳಿಕ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದಿದೆ. ಈ ಕ್ರಮ ಭ್ರಷ್ಟಾಚಾರದ ವಿರುದ್ಧವೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದ್ದಾರೆ ಎಂಬ ಕಾರಣಕ್ಕೊ’ ಎಂದು ಕೇಳಿದ್ದಾರೆ.</p>.<p>ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಲೂಟಿ ಮಾಡುವುದರಲ್ಲಿ ನಿರತವಾಗಿದೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರಿಗೆ ನೀಡಲು ಪ್ರತಿ ಜಿಲ್ಲೆಯಿಂದ ₹ 5 ಲಕ್ಷ ಸಂಗ್ರಹಿಸಲಾಗಿದೆ ಎಂಬ ಅಧಿಕಾರಿಗಳ ದೂರವಾಣಿ ಸಂಭಾಷಣೆ ಕುರಿತು ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದಾರೆ.</p>.<p>‘ಸಚಿವರಿಗೆ ಲಂಚದ ಮೊತ್ತ ಸಂಗ್ರಹಕ್ಕೆ ಸಂಬಂಧಿತ ಚರ್ಚೆ ಬಹಿರಂಗವಾದ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಚಿವರ ವಿರುದ್ಧವೇ ಲಂಚದ ಆರೋಪ ಕೇಳಿಬಂದಿದೆ. ಇದು, ಗಂಭೀರ ಪ್ರಕರಣ. ಮುಖ್ಯಮಂತ್ರಿಯವರು ತಕ್ಷಣವೇ ತನಿಖೆಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಅಬಕಾರಿ ಇಲಾಖೆಯಲ್ಲಿ ಕೆಳಗಿನಿಂದ ಮೇಲಿನವರೆಗೆ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಅಧಿಕಾರಿಗಳ ದೂರವಾಣಿ ಸಂಭಾಷಣೆ ಸಾಕ್ಷ್ಯ ನೀಡುತ್ತಿದೆ. ಸಂಭಾಷಣೆ ನಿಜವಾಗಿದ್ದಲ್ಲಿ ಗೋಪಾಲಯ್ಯ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದೂ ಆಗ್ರಹಿಸಿದ್ದಾರೆ.</p>.<p><strong>ಲಂಚ ಪಡೆದವರಿಗೆ ಶಿಕ್ಷೆ ಇಲ್ಲವೆ: ಎಚ್ಡಿಕೆ ಪ್ರಶ್ನೆ</strong></p>.<p><strong>ಬೆಂಗಳೂರು:</strong>ಸಚಿವ ಗೋಪಾಲಯ್ಯ ಅವರಿಗೆಸಂಬಂಧಿಸಿದ ಆಡಿಯೊ ಪ್ರಕರಣದಲ್ಲಿ ಲಂಚ ಕೊಟ್ಟಿರಬಹುದಾದ ಅಧಿಕಾರಿಗಳಿಗೆ ಶಿಕ್ಷೆ ಇದ್ದರೆ, ಪಡೆದಿರುವವರಿಗೆ ಶಿಕ್ಷೆಯೇ ಇಲ್ಲವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.</p>.<p>ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ದೂರವಾಣಿ ಕರೆಯ ರೆಕಾರ್ಡಿಂಗ್ ಬಹಿರಂಗವಾದ ಬಳಿಕ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದಿದೆ. ಈ ಕ್ರಮ ಭ್ರಷ್ಟಾಚಾರದ ವಿರುದ್ಧವೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದ್ದಾರೆ ಎಂಬ ಕಾರಣಕ್ಕೊ’ ಎಂದು ಕೇಳಿದ್ದಾರೆ.</p>.<p>ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಲೂಟಿ ಮಾಡುವುದರಲ್ಲಿ ನಿರತವಾಗಿದೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>