<p><strong>ಬೆಂಗಳೂರು:</strong> ‘ರಿಸರ್ವ್ ಬ್ಯಾಂಕ್ ಹೌಸಿಂಗ್ ಕೋ–ಆಪರೇಟಿವ್ ಸೊಸೈಟಿ’ ಹೆಸರಿನಲ್ಲಿ ನಿವೇಶನ ನೀಡುವುದಾಗಿ ಹೇಳಿ ₹ 35 ಲಕ್ಷ ಪಡೆದುಕೊಂಡು ವಂಚಿಸಲಾಗಿದ್ದು, ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಂಚನೆ ಸಂಬಂಧ ವೈದ್ಯೆಯೊಬ್ಬರು ದೂರು ನೀಡಿದ್ದಾರೆ. ವಾಣಿಜ್ಯ ತೆರಿಗೆ ಅಧಿಕಾರಿ ಗೌರಿ ಹಾಗೂ ಜಯಂತಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದ ಆರೋಪಿಗಳು, ₹ 1.50 ಲಕ್ಷಕ್ಕೆ ದೇವನಹಳ್ಳಿ ಬಳಿ ನಿವೇಶನ ನೀಡುವುದಾಗಿ ಹೇಳಿದ್ದರು. ಅದನ್ನು ನಂಬಿ ವೈದ್ಯೆ ಹಣ ಕೊಟ್ಟಿದ್ದರು. ಪ್ರತಿಯಾಗಿ ಸೊಸೈಟಿ ಹೆಸರಿನ ಪ್ರಮಾಣ ಪತ್ರ ಪಡೆದಿದ್ದರು. ನಂತರ, ಸ್ನೇಹಿತರು ಹಾಗೂ ಸಂಬಂಧಿಕರಿಂದ ಹಣ ಕೊಡಿಸಿ ನಿವೇಶನ ಖರೀದಿಸುವಂತೆ ಮಾಡಿದ್ದರು.’</p>.<p>‘ಇತ್ತೀಚೆಗೆ ಆರೋಪಿಗಳ ಬಗ್ಗೆ ಅನುಮಾನ ಬಂದಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗೆ ಹೋಗಿ ವಿಚಾರಿಸಿದ್ದರು. ತಾವು ಯಾವುದೇ ನಿವೇಶನ ಮಾಡಿಲ್ಲವೆಂದು ಅಧಿಕಾರಿಗಳು ಹೇಳಿದ್ದರು’ ಎಂದು ಪೊಲೀಸರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಿಸರ್ವ್ ಬ್ಯಾಂಕ್ ಹೌಸಿಂಗ್ ಕೋ–ಆಪರೇಟಿವ್ ಸೊಸೈಟಿ’ ಹೆಸರಿನಲ್ಲಿ ನಿವೇಶನ ನೀಡುವುದಾಗಿ ಹೇಳಿ ₹ 35 ಲಕ್ಷ ಪಡೆದುಕೊಂಡು ವಂಚಿಸಲಾಗಿದ್ದು, ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಂಚನೆ ಸಂಬಂಧ ವೈದ್ಯೆಯೊಬ್ಬರು ದೂರು ನೀಡಿದ್ದಾರೆ. ವಾಣಿಜ್ಯ ತೆರಿಗೆ ಅಧಿಕಾರಿ ಗೌರಿ ಹಾಗೂ ಜಯಂತಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದ ಆರೋಪಿಗಳು, ₹ 1.50 ಲಕ್ಷಕ್ಕೆ ದೇವನಹಳ್ಳಿ ಬಳಿ ನಿವೇಶನ ನೀಡುವುದಾಗಿ ಹೇಳಿದ್ದರು. ಅದನ್ನು ನಂಬಿ ವೈದ್ಯೆ ಹಣ ಕೊಟ್ಟಿದ್ದರು. ಪ್ರತಿಯಾಗಿ ಸೊಸೈಟಿ ಹೆಸರಿನ ಪ್ರಮಾಣ ಪತ್ರ ಪಡೆದಿದ್ದರು. ನಂತರ, ಸ್ನೇಹಿತರು ಹಾಗೂ ಸಂಬಂಧಿಕರಿಂದ ಹಣ ಕೊಡಿಸಿ ನಿವೇಶನ ಖರೀದಿಸುವಂತೆ ಮಾಡಿದ್ದರು.’</p>.<p>‘ಇತ್ತೀಚೆಗೆ ಆರೋಪಿಗಳ ಬಗ್ಗೆ ಅನುಮಾನ ಬಂದಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗೆ ಹೋಗಿ ವಿಚಾರಿಸಿದ್ದರು. ತಾವು ಯಾವುದೇ ನಿವೇಶನ ಮಾಡಿಲ್ಲವೆಂದು ಅಧಿಕಾರಿಗಳು ಹೇಳಿದ್ದರು’ ಎಂದು ಪೊಲೀಸರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>