ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

RCB ಸಂಭ್ರಮಾಚರಣೆಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

Published : 4 ಜೂನ್ 2025, 12:39 IST
Last Updated : 4 ಜೂನ್ 2025, 16:22 IST
ಫಾಲೋ ಮಾಡಿ
12:3904 Jun 2025

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

12:3904 Jun 2025

ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

12:3904 Jun 2025

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದು, ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ 12ರಿಂದಲೇ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಆರ್‌ಸಿಬಿ ಅಭಿಮಾನಿಗಳು ಬರಲು ಆರಂಭಿಸಿದ್ದರು. ಇದರಿಂದ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಪೋಷಕರ ಜತೆಗೆ ಪುಟ್ಟಮಕ್ಕಳು ಕ್ರೀಡಾಂಗಣದತ್ತ ಬಂದಿದ್ದು, ತೊಂದರೆಗೆ ಸಿಲುಕಿದ್ದಾರೆ.

12:3904 Jun 2025

ವಿಜಯೋತ್ಸವವನ್ನು ದಿಢೀರ್ ನಿರ್ಧಾರ ಮಾಡಿದ್ದರಿಂದ ಭದ್ರತೆಗೆ ಸಿಬ್ಬಂದಿ ನಿಯೋಜನೆಯಲ್ಲಿ ಸಮಸ್ಯೆ ಆಗಿದೆ. ದಿಢೀರ್‌ ಆಗಿ ದೊಡ್ಡಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ನಿಯಂತ್ರಣವು ಸಾಧ್ಯವಾಗದೇ ಪೊಲೀಸರು ಪರದಾಡಿದರು. ಕಡಿಮೆ ಸಮಸ್ಯೆಯಿದ್ದ ಕಾರಣಕ್ಕೆ ಬೇರೆ ಬೇರೆ ಭಾಗದ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಸಾಧ್ಯವಾಗಲಿಲ್ಲ. ಇನ್ನು ನಿಯೋಜನೆ ಮಾಡಿದ್ದ ಸಿಬ್ಬಂದಿಯೂ ತಮ್ಮ ಸ್ಥಳಕ್ಕೆ ತಲುಪುವುದು ಕಷ್ಟವಾಗಿತ್ತು.

12:4304 Jun 2025
12:5404 Jun 2025

ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಲೂ ಟ್ರಾಫಿಕ್ ಜಾಮ್

12:5504 Jun 2025

ವಿಧಾನಸೌಧ  ಎದುರು RCB ಅಭಿಮಾನಿಗಳು ನೆರೆದಿರುವುದು

12:5704 Jun 2025

ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರ: ಅಶೋಕ

ADVERTISEMENT
ADVERTISEMENT