‘ಇತ್ತೀಚೆಗಷ್ಟೇ ಅಭಿವೃದ್ಧಿಪಡಿಸಿರುವ ರಸ್ತೆಗಳಿಗೆ ಮತ್ತೆ ಟೆಂಡರ್ ಕರೆಯಲಾಗಿದೆ‘ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಬಿಬಿಎಂಪಿ ಆಡಳಿತಾಧಿಕಾರಿಗೆ ಹಾಗೂ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರಿಗೆ ದೂರು ನೀಡಿದ್ದರು. ಈ ಟೆಂಡರ್ ಪ್ರಕ್ರಿಯೆ ತಡೆ ಹಿಡಿಯುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಕ್ಟೋಬರ್ 14ರಂದು ಸೂಚಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಟಿವಿಸಿಸಿಗೆ ಸೂಚಿಸಿದ್ದರು.