<figcaption>""</figcaption>.<p><strong>ಬೆಂಗಳೂರು:</strong> ಜಯನಗರ ಕ್ಷೇತ್ರದ ಜೆ.ಪಿ.ನಗರ ಹಾಗೂ ಸಾರಕ್ಕಿ ವಾರ್ಡ್ಗಳಲ್ಲಿ ಇತ್ತೀಚೆಗಷ್ಟೇ ಅಭಿವೃದ್ಧಿಗೊಂಡು ಸುಸ್ಥಿತಿಯಲ್ಲಿದ್ದ ರಸ್ತೆಗಳ ಅಭಿವೃದ್ಧಿಗೆ ಮತ್ತೆ ಟೆಂಡರ್ ಕರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಕ್ತರ ಅಧೀನದ ತಾಂತ್ರಿಕ ಜಾಗೃತ ಕೋಶ (ಟಿವಿಸಿಸಿ) ವರದಿ ಸಲ್ಲಿಸಿದೆ.</p>.<p>ಟೆಂಡರ್ ಕರೆದಿರುವ 10 ರಸ್ತೆಗಳ ಪೈಕಿ ಒಂಬತ್ತು ರಸ್ತೆಗಳು ಸುಸ್ಥಿತಿಯಲ್ಲಿವೆ ಎಂದು 38 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಇತ್ತೀಚೆಗಷ್ಟೇ ಅಭಿವೃದ್ಧಿಪಡಿಸಿರುವ ರಸ್ತೆಗಳಿಗೆ ಮತ್ತೆ ಟೆಂಡರ್ ಕರೆಯಲಾಗಿದೆ‘ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಬಿಬಿಎಂಪಿ ಆಡಳಿತಾಧಿಕಾರಿಗೆ ಹಾಗೂ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರಿಗೆ ದೂರು ನೀಡಿದ್ದರು. ಈ ಟೆಂಡರ್ ಪ್ರಕ್ರಿಯೆ ತಡೆ ಹಿಡಿಯುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಕ್ಟೋಬರ್ 14ರಂದು ಸೂಚಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಟಿವಿಸಿಸಿಗೆ ಸೂಚಿಸಿದ್ದರು.</p>.<p>ಜೆ.ಪಿ.ನಗರ ಹಾಗೂ ಸಾರಕ್ಕಿ ವಾರ್ಡ್ಗಳ 10 ರಸ್ತೆಗಳನ್ನು ಒಟ್ಟು ₹ 7.94 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ<br />ಪಡಿಸಲು ಜಯನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಸೆ.21ರಂದು ಅಲ್ಪಾವಧಿ ಟೆಂಡರ್ ಕರೆದಿದ್ದರು. ಟೆಂಡರ್ ಅರ್ಜಿ<br />ಸಲ್ಲಿಸುವುದಕ್ಕೆ ಅ.12 ಕೊನೆಯ ದಿನವಾಗಿತ್ತು.</p>.<p>ಅಭಿವೃದ್ಧಿ ಕಾಮಗಾರಿಗಳಿಗಾಗಿ ಟೆಂಡರ್ ಕರೆದಿರುವ 10 ರಸ್ತೆಗಳಲ್ಲೂ ಈ ಹಿಂದೆ ಏನೆಲ್ಲ ಕಾಮಗಾರಿ ನಡೆಸಲಾಗಿದೆ. ಅವುಗಳ ಈಗಿನ ಸ್ಥಿತಿ ಹೇಗಿದೆ ಎಂಬ ಬಗ್ಗೆ ಛಾಯಾಚಿತ್ರಗಳ ಸಮೇತ ಸಂಪೂರ್ಣ ವರದಿ ನೀಡಬೇಕು. ಅಷ್ಟರವರೆಗೆ ಟೆಂಡರ್ ಪ್ರಕ್ರಿಯೆ ಮುಂದುವರಿಸಬಾರದು ಎಂದು ಕಾರ್ಯಪಾಲಕ ಎಂಜಿನಿಯರ್ಗೆ ಆಯಕ್ತರು ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ಜಯನಗರ ಕ್ಷೇತ್ರದ ಜೆ.ಪಿ.ನಗರ ಹಾಗೂ ಸಾರಕ್ಕಿ ವಾರ್ಡ್ಗಳಲ್ಲಿ ಇತ್ತೀಚೆಗಷ್ಟೇ ಅಭಿವೃದ್ಧಿಗೊಂಡು ಸುಸ್ಥಿತಿಯಲ್ಲಿದ್ದ ರಸ್ತೆಗಳ ಅಭಿವೃದ್ಧಿಗೆ ಮತ್ತೆ ಟೆಂಡರ್ ಕರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಕ್ತರ ಅಧೀನದ ತಾಂತ್ರಿಕ ಜಾಗೃತ ಕೋಶ (ಟಿವಿಸಿಸಿ) ವರದಿ ಸಲ್ಲಿಸಿದೆ.</p>.<p>ಟೆಂಡರ್ ಕರೆದಿರುವ 10 ರಸ್ತೆಗಳ ಪೈಕಿ ಒಂಬತ್ತು ರಸ್ತೆಗಳು ಸುಸ್ಥಿತಿಯಲ್ಲಿವೆ ಎಂದು 38 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಇತ್ತೀಚೆಗಷ್ಟೇ ಅಭಿವೃದ್ಧಿಪಡಿಸಿರುವ ರಸ್ತೆಗಳಿಗೆ ಮತ್ತೆ ಟೆಂಡರ್ ಕರೆಯಲಾಗಿದೆ‘ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಬಿಬಿಎಂಪಿ ಆಡಳಿತಾಧಿಕಾರಿಗೆ ಹಾಗೂ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರಿಗೆ ದೂರು ನೀಡಿದ್ದರು. ಈ ಟೆಂಡರ್ ಪ್ರಕ್ರಿಯೆ ತಡೆ ಹಿಡಿಯುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಕ್ಟೋಬರ್ 14ರಂದು ಸೂಚಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಟಿವಿಸಿಸಿಗೆ ಸೂಚಿಸಿದ್ದರು.</p>.<p>ಜೆ.ಪಿ.ನಗರ ಹಾಗೂ ಸಾರಕ್ಕಿ ವಾರ್ಡ್ಗಳ 10 ರಸ್ತೆಗಳನ್ನು ಒಟ್ಟು ₹ 7.94 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ<br />ಪಡಿಸಲು ಜಯನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಸೆ.21ರಂದು ಅಲ್ಪಾವಧಿ ಟೆಂಡರ್ ಕರೆದಿದ್ದರು. ಟೆಂಡರ್ ಅರ್ಜಿ<br />ಸಲ್ಲಿಸುವುದಕ್ಕೆ ಅ.12 ಕೊನೆಯ ದಿನವಾಗಿತ್ತು.</p>.<p>ಅಭಿವೃದ್ಧಿ ಕಾಮಗಾರಿಗಳಿಗಾಗಿ ಟೆಂಡರ್ ಕರೆದಿರುವ 10 ರಸ್ತೆಗಳಲ್ಲೂ ಈ ಹಿಂದೆ ಏನೆಲ್ಲ ಕಾಮಗಾರಿ ನಡೆಸಲಾಗಿದೆ. ಅವುಗಳ ಈಗಿನ ಸ್ಥಿತಿ ಹೇಗಿದೆ ಎಂಬ ಬಗ್ಗೆ ಛಾಯಾಚಿತ್ರಗಳ ಸಮೇತ ಸಂಪೂರ್ಣ ವರದಿ ನೀಡಬೇಕು. ಅಷ್ಟರವರೆಗೆ ಟೆಂಡರ್ ಪ್ರಕ್ರಿಯೆ ಮುಂದುವರಿಸಬಾರದು ಎಂದು ಕಾರ್ಯಪಾಲಕ ಎಂಜಿನಿಯರ್ಗೆ ಆಯಕ್ತರು ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>