ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಆಘಾತ ವ್ಯಕ್ತಪಡಿಸಿ, ‘ಈ ರೀತಿಯ ಬೀಸು ಹೇಳಿಕೆ ನೀಡಬಾರದು‘ ಎಂದು ಎಚ್ಚರಿಕೆ ನೀಡಿತ್ತು. ಅಲ್ಲದೇ ಆಕ್ಷೇಪಣೆ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ವಿಚಾರಣೆ ನಡೆಸುವಂತೆ ಎನ್ಎಚ್ಎಐ ಅಧ್ಯಕ್ಷರಿಗೆ ನಿರ್ದೇಶನ ನೀಡಿತ್ತು. ಈ ಹೇಳಿಕೆ ಸಲ್ಲಿಸಲು ಕಾರಣವಾದ ಅಧಿಕಾರಿಗಳ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ತಿಳಿಸಿತ್ತು.