<p><strong>ಬೆಂಗಳೂರು</strong>: ಮಾಹಿತಿ ಆಯುಕ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯನ್ನು ಆಧರಿಸಿ ಪಟ್ಟಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.</p>.<p>ಮಾಹಿತಿ ಆಯುಕ್ತರ ಹುದ್ದೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಾಹಿತಿ ಆಯುಕ್ತರ ಆರು ಹುದ್ದೆಗಳು ಖಾಲಿ ಇದ್ದು, 586 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ವಿವರ ನೀಡಿದರು.</p>.<p>ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ‘ಅರ್ಜಿಗಳನ್ನು ಪರಿಶೀಲಿಸಬೇಕು. ಮಾನದಂಡ ಅನ್ವಯಿಸಿ, ಅರ್ಹತಾ ಪಟ್ಟಿ ಸಿದ್ಧಪಡಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಕೆಲ ಮಾರ್ಗಸೂಚಿಗಳನ್ನು ನಿಗದಿ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯನ್ನು ಕೋರ್ಟ್ ನಿರ್ದೇಶನದಂತೆ ಅಂತಿಮಗೊಳಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.</p>.<p>ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಅತ್ಯಂತ ಅರ್ಹತಾ ಅಂಶಗಳನ್ನು ಹೊಂದಿರುವ 20 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಬೇಕು. ಸೆ. 5ಕ್ಕೆ ಮತ್ತೆ ಸಭೆ ನಿಗದಿ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಹಿತಿ ಆಯುಕ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯನ್ನು ಆಧರಿಸಿ ಪಟ್ಟಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.</p>.<p>ಮಾಹಿತಿ ಆಯುಕ್ತರ ಹುದ್ದೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಾಹಿತಿ ಆಯುಕ್ತರ ಆರು ಹುದ್ದೆಗಳು ಖಾಲಿ ಇದ್ದು, 586 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ವಿವರ ನೀಡಿದರು.</p>.<p>ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ‘ಅರ್ಜಿಗಳನ್ನು ಪರಿಶೀಲಿಸಬೇಕು. ಮಾನದಂಡ ಅನ್ವಯಿಸಿ, ಅರ್ಹತಾ ಪಟ್ಟಿ ಸಿದ್ಧಪಡಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಕೆಲ ಮಾರ್ಗಸೂಚಿಗಳನ್ನು ನಿಗದಿ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯನ್ನು ಕೋರ್ಟ್ ನಿರ್ದೇಶನದಂತೆ ಅಂತಿಮಗೊಳಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.</p>.<p>ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಅತ್ಯಂತ ಅರ್ಹತಾ ಅಂಶಗಳನ್ನು ಹೊಂದಿರುವ 20 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಬೇಕು. ಸೆ. 5ಕ್ಕೆ ಮತ್ತೆ ಸಭೆ ನಿಗದಿ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>