ಈ ಕುರಿತು ಸುತ್ತೋಲೆ ಹೊರಡಿಸಿರುವ ಇಲಾಖೆಯ ಆಯುಕ್ತ ಡಿ. ರಂದೀಪ್, ‘ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ವೇಳೆ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕು. ಯಾವುದೇ ಕ್ಷಣದಲ್ಲಿ ತುರ್ತು ಸಭೆಗಳು ಹಾಗೂ ತ್ವರಿತ ನಿಯಂತ್ರಣ ಕಾರ್ಯಗಳನ್ನು ಕೈಗೊಳ್ಳಬೇಕಾಗಿ ಬರುತ್ತದೆ. ಆದ್ದರಿಂದ ಪೂರ್ವಾನುಮತಿ ಇಲ್ಲದೆಯೇ ಕೇಂದ್ರ ಸ್ಥಾನ ಬಿಟ್ಟು ತೆರಳುವಂತಿಲ್ಲ’ ಎಂದು ಹೇಳಿದ್ದಾರೆ.