<p><strong>ಬೆಂಗಳೂರು:</strong> ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಕಾರಿನಲ್ಲೇ ಕೊಲೆ ಮಾಡಿರುವ ಘಟನೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿ ಯಲ್ಲಿ ಶನಿವಾರ ನಡೆದಿದೆ. </p> <p>ಮಾಗಡಿ ತಾಲೂಕಿನ ಕುದೂರು ಮೂಲದ ಲೋಕನಾಥ್ ಸಿಂಗ್(37) ಕೊಲೆಯಾದ ಉದ್ಯಮಿ.</p> <p>ಕೃತ್ಯ ಎಸಗಿರುವ ಅಪರಿಚಿತ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಸಂಜೆ 6 ಗಂಟೆ ಸುಮಾರಿಗೆ ಬಿಜಿಎಸ್ ಲೇಔಟ್ ನಿರ್ಮಾಣ ಹಂತದ ಕಟ್ಟಡದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು. </p> <p>ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಲೋಕನಾಥ್ ಸಿಂಗ್ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಾಲ್ಕೈದು ಮಂದಿ ಸ್ನೇಹಿತರ ಜತೆ ಸೋಲದೇವನಹಳ್ಳಿಯ ಬಿಳಿಜಾಜಿಯ ಬಿಜಿಎಸ್ ಲೇಔಟ್ನಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಕಾರಿನಲ್ಲಿ ಬಂದು ಮದ್ಯ ಸೇವಿಸಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಜತೆಯಲ್ಲಿದ್ದವರೇ ಲೋಕನಾಥ್ ಸಿಂಗ್ ಕುತ್ತಿಗೆಗೆ ಮಾರಕಾಸ್ತ್ರದಿಂದ ಚುಚ್ಚಿದ್ದಾರೆ. ಆದರೂ ಲೋಕನಾಥ್, ಪ್ರಾಣ ರಕ್ಷಣೆಗಾಗಿ ಆರೋಪಿಗಳನ್ನು ತಳ್ಳಿ ಕಾರಿನಿಂದ ಇಳಿದು ಸ್ವಲ್ಪ ದೂರ ಓಡಿ ಹೋದರು. ಆದರೆ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು ಎಂದು ಹೇಳಿದ್ದಾರೆ. </p> <p>ಪೊಲೀಸರು ಘಟನಾ ಸ್ಥಳದ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದರು.</p> <p>‘ಲೋಕನಾಥ್ ಸಿಂಗ್ ಜತೆ ಬಂದಿದ್ದ ಅವರ ಗನ್ಮ್ಯಾನ್ ಕೂಡ ನಾಪತ್ತೆಯಾಗಿದ್ದು, ಆತನ ಮೇಲೂ ಅನುಮಾನ ಇದೆ’ ಎಂದು ಪೊಲೀಸರು ಮಾಹಿತಿ ನೀಡಿದರು. </p> <p>ಉದ್ಯಮಿಯಾಗಿದ್ದ ಲೋಕನಾಥ್ ಸಿಂಗ್ ವಿರುದ್ಧ ನಗರದ ಕೆಲ ಠಾಣೆಗಳಲ್ಲಿ ಮೂರಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p> <h2><strong>ಮಾಗಡಿ ಶಾಸಕರ ಆಪ್ತ?: </strong></h2><p>ಕೊಲೆಯಾದ ಲೋಕನಾಥ್ ಸಿಂಗ್ ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಕಾರಿನಲ್ಲೇ ಕೊಲೆ ಮಾಡಿರುವ ಘಟನೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿ ಯಲ್ಲಿ ಶನಿವಾರ ನಡೆದಿದೆ. </p> <p>ಮಾಗಡಿ ತಾಲೂಕಿನ ಕುದೂರು ಮೂಲದ ಲೋಕನಾಥ್ ಸಿಂಗ್(37) ಕೊಲೆಯಾದ ಉದ್ಯಮಿ.</p> <p>ಕೃತ್ಯ ಎಸಗಿರುವ ಅಪರಿಚಿತ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಸಂಜೆ 6 ಗಂಟೆ ಸುಮಾರಿಗೆ ಬಿಜಿಎಸ್ ಲೇಔಟ್ ನಿರ್ಮಾಣ ಹಂತದ ಕಟ್ಟಡದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು. </p> <p>ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಲೋಕನಾಥ್ ಸಿಂಗ್ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಾಲ್ಕೈದು ಮಂದಿ ಸ್ನೇಹಿತರ ಜತೆ ಸೋಲದೇವನಹಳ್ಳಿಯ ಬಿಳಿಜಾಜಿಯ ಬಿಜಿಎಸ್ ಲೇಔಟ್ನಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಕಾರಿನಲ್ಲಿ ಬಂದು ಮದ್ಯ ಸೇವಿಸಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಜತೆಯಲ್ಲಿದ್ದವರೇ ಲೋಕನಾಥ್ ಸಿಂಗ್ ಕುತ್ತಿಗೆಗೆ ಮಾರಕಾಸ್ತ್ರದಿಂದ ಚುಚ್ಚಿದ್ದಾರೆ. ಆದರೂ ಲೋಕನಾಥ್, ಪ್ರಾಣ ರಕ್ಷಣೆಗಾಗಿ ಆರೋಪಿಗಳನ್ನು ತಳ್ಳಿ ಕಾರಿನಿಂದ ಇಳಿದು ಸ್ವಲ್ಪ ದೂರ ಓಡಿ ಹೋದರು. ಆದರೆ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು ಎಂದು ಹೇಳಿದ್ದಾರೆ. </p> <p>ಪೊಲೀಸರು ಘಟನಾ ಸ್ಥಳದ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದರು.</p> <p>‘ಲೋಕನಾಥ್ ಸಿಂಗ್ ಜತೆ ಬಂದಿದ್ದ ಅವರ ಗನ್ಮ್ಯಾನ್ ಕೂಡ ನಾಪತ್ತೆಯಾಗಿದ್ದು, ಆತನ ಮೇಲೂ ಅನುಮಾನ ಇದೆ’ ಎಂದು ಪೊಲೀಸರು ಮಾಹಿತಿ ನೀಡಿದರು. </p> <p>ಉದ್ಯಮಿಯಾಗಿದ್ದ ಲೋಕನಾಥ್ ಸಿಂಗ್ ವಿರುದ್ಧ ನಗರದ ಕೆಲ ಠಾಣೆಗಳಲ್ಲಿ ಮೂರಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p> <h2><strong>ಮಾಗಡಿ ಶಾಸಕರ ಆಪ್ತ?: </strong></h2><p>ಕೊಲೆಯಾದ ಲೋಕನಾಥ್ ಸಿಂಗ್ ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>