ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೇತನ ಪರಿಷ್ಕರಣೆ: ಬಜೆಟ್‌ನಲ್ಲಿ ಅನುದಾನ’

Last Updated 1 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಬೇಕಾದ ಅನುದಾನವನ್ನು ಇದೇ 16ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಒದಗಿಸುತ್ತೇನೆ’ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಆಯೋಗದ ವರದಿ ತೃಪ್ತಿತಂದಿಲ್ಲ ಎಂದು ನೌಕರರ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಮರುಪರಿಶೀಲನೆ ಮಾಡುತ್ತೀರಾ’ ಎಂಬ ಪ್ರಶ್ನೆಗೆ, ‘ನಾನಿನ್ನೂ ವರದಿ ಓದಿಲ್ಲ. ಯಾವುದೇ ನೌಕರರ ಸಂಘದವರು ನನ್ನನ್ನು ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿಲ್ಲ. ವರದಿ ಓದಿದ ನಂತರ ಪ್ರತಿಕ್ರಿಯಿಸುವೆ’ ಎಂದರು.

‘ಯಾವಗ ಪರಿಷ್ಕೃತ ವೇತನ ಜಾರಿಯಾಗಲಿದೆ’ ಎಂಬ ಪ್ರಶ್ನೆಗೆ, ‘ಬಜೆಟ್‌ನಲ್ಲಿ ಘೋಷಿಸುವುದು ಮಾತ್ರವಲ್ಲ, ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ವೇತನ ಪರಿಷ್ಕರಣೆ ಆದೇಶ ಹೊರಡಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT