ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರು ಉತ್ತರ ವಿಶೇಷ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಈ ದಾಖಲೆಗಳು ಬೋಗಸ್ ಎಂದು ಸೆಪ್ಟೆಂಬರ್ 24 ಆದೇಶ ಹೊರಡಿಸಿದ್ದರು. ಬಾಲ್ ಪೆನ್ನಲ್ಲಿ ದಾಖಲೆಗಳನ್ನು ತಿದ್ದಲಾಗಿದೆ ಎಂದೂ ಆದೇಶದಲ್ಲಿ ಉಲ್ಲೇಖಿಸಿದ್ದರು. ನಕಲಿ ದಾಖಲೆ ಸೃಷ್ಟಿಸಿ ಹಕ್ಕು ಸ್ಥಾಪಿಸಿರುವ ಭಾಗ್ಯಮ್ಮ, ಕೆಂಚಣ್ಣ, ಸುಬ್ರಮಣಿ, ಶಾಂತಮ್ಮ, ಬಸಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ಸೂಚಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಹಕರಿಸಿರುವ ರಘುಮೂರ್ತಿ, ತಹಶೀಲ್ದಾರ್ ಕಚೇರಿಯ ಇತರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದ್ದರು.ಈ ಕುರಿತು ’ಪ್ರಜಾವಾಣಿ’ಯ ಭಾನುವಾರದ ಸಂಚಿಕೆಯಲ್ಲಿ ‘ನೂರು ಕೋಟಿ ಪರಿಹಾರಕ್ಕೆ ಬಾಲ್ಪೆನ್ ಕರಾಮತ್ತು!’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.