<p><strong>ಬೆಂಗಳೂರು</strong>: ನಗರ ಪಾಲಿಕೆ ಮಟ್ಟದಲ್ಲಿ ಇ-ಆಫೀಸ್ ಮೂಲಕವೇ ಕಡತ ವಿಲೇವಾರಿಗೆ ಕ್ರಮವಹಿಸಬೇಕು. ಕಾಗದ ಸ್ವರೂಪದ ದಾಖಲೆಗಳನ್ನು ಕ್ರಮೇಣ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹೇಳಿದರು.</p>.<p>ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ಕಾಮಗಾರಿಗಳು ಎರಡು ಅಥವಾ ಹೆಚ್ಚು ನಗರ ಪಾಲಿಕೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದರೆ, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ನಗರ ಪಾಲಿಕೆ ಕಚೇರಿಗಳು ಹಾಗೂ ಉಪವಿಭಾಗಗಳಲ್ಲಿ ಮಾನವ ಸಂಪನ್ಮೂಲದ ಕೊರತೆ ಇರುವ ಸ್ಥಳಗಳನ್ನು ಗುರುತಿಸಿ, ಅಗತ್ಯ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವ ಸಲ್ಲಿಸಲು ನಿರ್ದೇಶನ ನೀಡಿದರು.</p>.<p>ಆಯಾ ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತ ಮಾಹಿತಿ ಪಡೆಯಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ಆ ನೋಡಲ್ ಅಧಿಕಾರಿ ಜಿಬಿಎ ಸಮನ್ವಯ ವಿಭಾಗದ ಜೊತೆ ಕಾಮಗಾರಿಗಳ ಕುರಿತು ಕಾಲ-ಕಾಲಕ್ಕೆ ಮಾಹಿತಿ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್. ರಮೇಶ್, ವಿಶೇಷ ಆಯುಕ್ತ ಕೆ. ಹರೀಶ್ ಕುಮಾರ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಜಂಟಿ ಆಯುಕ್ತ ಮಧು ಪಾಟೀಲ್, ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ, ರಾಜೇಶ್, ರವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರ ಪಾಲಿಕೆ ಮಟ್ಟದಲ್ಲಿ ಇ-ಆಫೀಸ್ ಮೂಲಕವೇ ಕಡತ ವಿಲೇವಾರಿಗೆ ಕ್ರಮವಹಿಸಬೇಕು. ಕಾಗದ ಸ್ವರೂಪದ ದಾಖಲೆಗಳನ್ನು ಕ್ರಮೇಣ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹೇಳಿದರು.</p>.<p>ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ಕಾಮಗಾರಿಗಳು ಎರಡು ಅಥವಾ ಹೆಚ್ಚು ನಗರ ಪಾಲಿಕೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದರೆ, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ನಗರ ಪಾಲಿಕೆ ಕಚೇರಿಗಳು ಹಾಗೂ ಉಪವಿಭಾಗಗಳಲ್ಲಿ ಮಾನವ ಸಂಪನ್ಮೂಲದ ಕೊರತೆ ಇರುವ ಸ್ಥಳಗಳನ್ನು ಗುರುತಿಸಿ, ಅಗತ್ಯ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವ ಸಲ್ಲಿಸಲು ನಿರ್ದೇಶನ ನೀಡಿದರು.</p>.<p>ಆಯಾ ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತ ಮಾಹಿತಿ ಪಡೆಯಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ಆ ನೋಡಲ್ ಅಧಿಕಾರಿ ಜಿಬಿಎ ಸಮನ್ವಯ ವಿಭಾಗದ ಜೊತೆ ಕಾಮಗಾರಿಗಳ ಕುರಿತು ಕಾಲ-ಕಾಲಕ್ಕೆ ಮಾಹಿತಿ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್. ರಮೇಶ್, ವಿಶೇಷ ಆಯುಕ್ತ ಕೆ. ಹರೀಶ್ ಕುಮಾರ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಜಂಟಿ ಆಯುಕ್ತ ಮಧು ಪಾಟೀಲ್, ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ, ರಾಜೇಶ್, ರವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>