ಮುನಿರತ್ನ ಪತ್ರದಲ್ಲೇನಿದೆ: ‘2018–19ನೇ ಸಾಲಿನಲ್ಲಿ ಮುಖ್ಯಮಂತ್ರಿ ನವನಗರೋತ್ಥಾನ ಯೋಜನೆಯಡಿ ₹ 8,015.37 ಕೋಟಿ ಕ್ರಿಯಾಯೋಜನೆಗೆ ಬಿಬಿಎಂಪಿ ಬಜೆಟ್ನಲ್ಲಿ ಅನುಮೋದನೆ ನೀಡಲಾಗಿದೆ. ಇದರಡಿ ಪ್ರಮುಖ ರಸ್ತೆಗಳು, ಉಪಪ್ರಮುಖ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹ 4,107.34 ಕೋಟಿ ಮೀಸಲಿಡಲಾಗಿದೆ. ಹಲವಾರು ಕಾಮಗಾರಿಗಳು ಪೂರ್ಣಗೊಂಡಿದ್ದು, ಬಿಲ್ ಪಾವತಿಗಾಗಿ ಕೋರಿಕೆಗಳು ಸಲ್ಲಿಕೆಯಾಗಿವೆ. ರಸ್ತೆ ಮತ್ತು ಮೂಲಸೌಕರ್ಯ ವಿಭಾಗ ನಿರ್ವಹಿಸಿರುವ ಪ್ರಮುಖ ರಸ್ತೆಗಳಿಗೆ ಮತ್ತು ಉಪ ಪ್ರಮುಖ ರಸ್ತೆಗಳಿಗೆ ಬಿಲ್ ಸಲ್ಲಿಕೆ ಆದ ತಕ್ಷಣವೇ ಆದ್ಯತೆ ಮೇರೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ.’