ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ನಾಳೆ ‘ರೆಡ್ ಅಲರ್ಟ್’

Last Updated 10 ಸೆಪ್ಟೆಂಬರ್ 2020, 2:28 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.11ರಂದು ಮೂರೂ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

‘ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿದೆ. ರಾಜ್ಯದಲ್ಲಿ ಸೆ.14 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗರಿಷ್ಠ 2.6 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸು
ತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಸಿದ್ದಾರೆ.

7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’: ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುರುವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಮಳೆ-ಎಲ್ಲಿ, ಎಷ್ಟು?: ಬೆಂಗಳೂರಿನ ಹೆಸರಘಟ್ಟ ಭಾಗದಲ್ಲಿ ಗರಿಷ್ಠ 15 ಸೆಂ.ಮೀ ಮಳೆಯಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಗುಬ್ಬಿ, ಕೊರಟಗೆರೆ 10, ದಾವಣಗೆರೆ 8, ಚಿಕ್ಕೋಡಿ, ನಿಪ್ಪಾಣಿ, ಬಂಗಾರಪೇಟೆ, ದೊಡ್ಡಬಳ್ಳಾಪುರ, ಚಿತ್ರದುರ್ಗ 7, ಹೊಸಕೋಟೆ, ಹರಪನಹಳ್ಳಿ, ಹಿರಿಯೂರು 6, ಚಳ್ಳಕೆರೆ 5, ಭದ್ರಾವತಿ, ನೆಲಮಂಗಲ, ಚಿಕ್ಕಬಳ್ಳಾಪುರ, ಮಧುಗಿರಿ, ಶಿರಾ, ಪಾವಗಡ 3, ಮಂಗಳೂರು, ಹಾವೇರಿ, ಕೊಪ್ಪಳ, ಉಡುಪಿ, ಸಿಂಧನೂರು, ಮಾಲೂರು, ಕಂಪ್ಲಿ, ತುಮಕೂರು 2, ಬೈಲಹೊಂಗಲ, ಸೊರಬ, ಕೋಲಾರ, ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT