<p><strong>ಬೆಂಗಳೂರು: </strong>ರಕ್ತ ಚಂದನದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ಅಬ್ದುಲ್ ರೆಹಮಾನ್ (25) ಅವರನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೋಲಾರ ಜಿಲ್ಲೆಯ ಬೇತಮಂಗಲ ನ್ಯೂ ಟೌನ್ನ ಅಬ್ದುಲ್ ರೆಹಮಾನ್, ಕಾರಿನಲ್ಲಿ ರಕ್ತಚಂದನ ತಂದು ಮಾರಲು ಯತ್ನಿಸುತ್ತಿದ್ದ. ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ. ಆತನಿಂದ 250 ಕೆ.ಜಿ ತೂಕದ 6 ರಕ್ತಚಂದನ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆಲ ಆರೋಪಿಗಳು, ರಕ್ತಚಂದನ ತುಂಡುಗಳನ್ನು ಒಂದೆಡೆ ಸಂಗ್ರಹಿಸಿ ಸಾಗಿಸಲು ತಯಾರಿ ನಡೆಸಿದ್ದರು. ಆ ಬಗ್ಗೆ ತಿಳಿದಿದ್ದ ಆರೋಪಿ, ತುಂಡುಗಳನ್ನು ಕದ್ದುಕೊಂಡು ಬಂದಿದ್ದ. ಗ್ರಾಹಕರೊಬ್ಬರಿಗೆ ಮಾರಲು ಕಾಯುತ್ತಿದ್ದಾಗಲೇ ನಮಗೆ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.</p>.<p>‘ಆರೋಪಿ ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿರುವುದು ಗೊತ್ತಾಗಿದೆ. ರಕ್ತಚಂದನ ಮಾರಾಟದಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಕ್ತ ಚಂದನದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ಅಬ್ದುಲ್ ರೆಹಮಾನ್ (25) ಅವರನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೋಲಾರ ಜಿಲ್ಲೆಯ ಬೇತಮಂಗಲ ನ್ಯೂ ಟೌನ್ನ ಅಬ್ದುಲ್ ರೆಹಮಾನ್, ಕಾರಿನಲ್ಲಿ ರಕ್ತಚಂದನ ತಂದು ಮಾರಲು ಯತ್ನಿಸುತ್ತಿದ್ದ. ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ. ಆತನಿಂದ 250 ಕೆ.ಜಿ ತೂಕದ 6 ರಕ್ತಚಂದನ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆಲ ಆರೋಪಿಗಳು, ರಕ್ತಚಂದನ ತುಂಡುಗಳನ್ನು ಒಂದೆಡೆ ಸಂಗ್ರಹಿಸಿ ಸಾಗಿಸಲು ತಯಾರಿ ನಡೆಸಿದ್ದರು. ಆ ಬಗ್ಗೆ ತಿಳಿದಿದ್ದ ಆರೋಪಿ, ತುಂಡುಗಳನ್ನು ಕದ್ದುಕೊಂಡು ಬಂದಿದ್ದ. ಗ್ರಾಹಕರೊಬ್ಬರಿಗೆ ಮಾರಲು ಕಾಯುತ್ತಿದ್ದಾಗಲೇ ನಮಗೆ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.</p>.<p>‘ಆರೋಪಿ ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿರುವುದು ಗೊತ್ತಾಗಿದೆ. ರಕ್ತಚಂದನ ಮಾರಾಟದಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>