<p><strong>ಬೆಂಗಳೂರು: </strong>ತೋಟದ ಮನೆಯ ನೀರಿನ ಸಂಪಿನಲ್ಲಿ ರಕ್ತಚಂದನ ಬಚ್ಚಿಟ್ಟು ಮಾರುತ್ತಿದ್ದ ಜಾಲ ಭೇದಿಸಿರುವ ಬ್ಯಾಟರಾಯನಪುರ ಪೊಲೀಸರು, ಆರೋಪಿ ವಿನೋದ್ ಎಂಬುವರನ್ನು ಬಂಧಿಸಿದ್ದಾರೆ.</p>.<p>‘ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣ ಬಳಿಯ ನ್ಯೂ ಟಿಂಬರ್ ಬಡಾವಣೆಯಲ್ಲಿ ಆರೋಪಿ ವಿನೋದ್ ಹಾಗೂ ಸಹಚರ ಅಕ್ರಮವಾಗಿ ರಕ್ತಚಂದನ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಗಿತ್ತು. ಅಜಯ್ ಓಡಿಹೋದ. ವಿನೋದ್ ಸಿಕ್ಕಿಬಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ತಮಿಳುನಾಡಿನ ವಿನೋದ್, ರಕ್ತಚಂದನ ಮಾರಲೆಂದೇ ನಗರಕ್ಕೆ ಆಗಾಗ ಬಂದು ಹೋಗುತ್ತಿದ್ದ. ಬಂಧಿತ ವಿನೋದ್ ನೀಡಿದ್ದ ಮಾಹಿತಿ ಆಧರಿಸಿ ₹2.68 ಕೋಟಿ ಮೌಲ್ಯದ 1,693 ಕೆ.ಜಿ ರಕ್ತಚಂದನ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ರಕ್ತಚಂದನ ಅಕ್ರಮ ಸಾಗಣೆ ಹಾಗೂ ಮಾರಾಟದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ’ ಎಂದೂ ತಿಳಿಸಿದರು.</p>.<p class="Subhead"><strong>ಹೆಸರಘಟ್ಟದಲ್ಲಿ ಸಂಗ್ರಹ:</strong> ‘ಜಾಲದ ಪ್ರಮುಖ ಆರೋಪಿಗಳು ರಕ್ತಚಂದನವನ್ನು ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತರುತ್ತಿದ್ದರು. ವಿನೋದ್ ಹಾಗೂ ಇತರರು ರಕ್ತ ಚಂದನವನ್ನು ನಗರದಲ್ಲಿ ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹೆಸರಘಟ್ಟ ಬಳಿಯ ತೋಟದ ಮನೆಯೊಂದರ ನೀರಿನ ಸಂಪಿನಲ್ಲಿ ರಕ್ತಚಂದನ ತುಂಡುಗಳನ್ನು ವಿನೋದ್ ಬಚ್ಚಿಡುತ್ತಿದ್ದ. ಅಲ್ಲಿಂದಲೇ ಗ್ರಾಹಕರಿಗೆ ರಕ್ತಚಂದನ ತುಂಡುಗಳನ್ನು ಪೂರೈಕೆ ಮಾಡುತ್ತಿದ್ದ. ವಿನೋದ್ ಬಂಧನವಾಗುತ್ತಿದ್ದಂತೆ ತೋಟದ ಮನೆ ಮೇಲೆ ದಾಳಿ ಮಾಡಿ ರಕ್ತಚಂದನ ಜಪ್ತಿ ಮಾಡಲಾಯಿತು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತೋಟದ ಮನೆಯ ನೀರಿನ ಸಂಪಿನಲ್ಲಿ ರಕ್ತಚಂದನ ಬಚ್ಚಿಟ್ಟು ಮಾರುತ್ತಿದ್ದ ಜಾಲ ಭೇದಿಸಿರುವ ಬ್ಯಾಟರಾಯನಪುರ ಪೊಲೀಸರು, ಆರೋಪಿ ವಿನೋದ್ ಎಂಬುವರನ್ನು ಬಂಧಿಸಿದ್ದಾರೆ.</p>.<p>‘ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣ ಬಳಿಯ ನ್ಯೂ ಟಿಂಬರ್ ಬಡಾವಣೆಯಲ್ಲಿ ಆರೋಪಿ ವಿನೋದ್ ಹಾಗೂ ಸಹಚರ ಅಕ್ರಮವಾಗಿ ರಕ್ತಚಂದನ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಗಿತ್ತು. ಅಜಯ್ ಓಡಿಹೋದ. ವಿನೋದ್ ಸಿಕ್ಕಿಬಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ತಮಿಳುನಾಡಿನ ವಿನೋದ್, ರಕ್ತಚಂದನ ಮಾರಲೆಂದೇ ನಗರಕ್ಕೆ ಆಗಾಗ ಬಂದು ಹೋಗುತ್ತಿದ್ದ. ಬಂಧಿತ ವಿನೋದ್ ನೀಡಿದ್ದ ಮಾಹಿತಿ ಆಧರಿಸಿ ₹2.68 ಕೋಟಿ ಮೌಲ್ಯದ 1,693 ಕೆ.ಜಿ ರಕ್ತಚಂದನ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ರಕ್ತಚಂದನ ಅಕ್ರಮ ಸಾಗಣೆ ಹಾಗೂ ಮಾರಾಟದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ’ ಎಂದೂ ತಿಳಿಸಿದರು.</p>.<p class="Subhead"><strong>ಹೆಸರಘಟ್ಟದಲ್ಲಿ ಸಂಗ್ರಹ:</strong> ‘ಜಾಲದ ಪ್ರಮುಖ ಆರೋಪಿಗಳು ರಕ್ತಚಂದನವನ್ನು ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತರುತ್ತಿದ್ದರು. ವಿನೋದ್ ಹಾಗೂ ಇತರರು ರಕ್ತ ಚಂದನವನ್ನು ನಗರದಲ್ಲಿ ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹೆಸರಘಟ್ಟ ಬಳಿಯ ತೋಟದ ಮನೆಯೊಂದರ ನೀರಿನ ಸಂಪಿನಲ್ಲಿ ರಕ್ತಚಂದನ ತುಂಡುಗಳನ್ನು ವಿನೋದ್ ಬಚ್ಚಿಡುತ್ತಿದ್ದ. ಅಲ್ಲಿಂದಲೇ ಗ್ರಾಹಕರಿಗೆ ರಕ್ತಚಂದನ ತುಂಡುಗಳನ್ನು ಪೂರೈಕೆ ಮಾಡುತ್ತಿದ್ದ. ವಿನೋದ್ ಬಂಧನವಾಗುತ್ತಿದ್ದಂತೆ ತೋಟದ ಮನೆ ಮೇಲೆ ದಾಳಿ ಮಾಡಿ ರಕ್ತಚಂದನ ಜಪ್ತಿ ಮಾಡಲಾಯಿತು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>