‘ತಮಿಳುನಾಡಿನ ವಿನೋದ್, ರಕ್ತಚಂದನ ಮಾರಲೆಂದೇ ನಗರಕ್ಕೆ ಆಗಾಗ ಬಂದು ಹೋಗುತ್ತಿದ್ದ. ಬಂಧಿತ ವಿನೋದ್ ನೀಡಿದ್ದ ಮಾಹಿತಿ ಆಧರಿಸಿ ₹2.68 ಕೋಟಿ ಮೌಲ್ಯದ 1,693 ಕೆ.ಜಿ ರಕ್ತಚಂದನ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ರಕ್ತಚಂದನ ಅಕ್ರಮ ಸಾಗಣೆ ಹಾಗೂ ಮಾರಾಟದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ’ ಎಂದೂ ತಿಳಿಸಿದರು.