ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಶಾಸಕರಿಗೆ ಅನ್ಯಾಯ: ರಾಮಲಿಂಗಾರೆಡ್ಡಿ

ಸಮುದಾಯದ ಪ್ರಮುಖರಿಗೆ ಅಭಿನಂದನಾ ಸಮಾರಂಭ
Last Updated 12 ಅಕ್ಟೋಬರ್ 2021, 21:39 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಸಮುದಾಯದ ಒಬ್ಬ ಶಾಸಕರಿಗೂ ಸಚಿವ ಸ್ಥಾನ ನೀಡದೆ, ಅನ್ಯಾಯ ಮಾಡಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಮಾರತ್ತಹಳ್ಳಿಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು ರೆಡ್ಡಿ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಸಮುದಾಯದ ಪ್ರಮುಖರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾ
ಡಿದರು.

‘ರೆಡ್ಡಿ ಸಮುದಾಯದ ಶಾಸಕರಿಗೆ ಅರ್ಹತೆ ಇದ್ದರೂ ಸಚಿವ ಸ್ಥಾನ ನೀಡದೆ, ನಿರ್ಲಕ್ಷ್ಯ ತೋರಿರುವುದರಿಂದ ಸಮುದಾಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಪಕ್ಷಬೇದ ಮರೆತು ಸಮುದಾಯದ ಏಳಿಗೆಗೆ ಶ್ರಮಿಸಬೇಕು’ ಎಂದರು.

‘ರೆಡ್ಡಿ ಸಮುದಾಯದಲ್ಲಿ ಒಗ್ಗಟ್ಟು ಬರುವವರೆಗೂರಾಜಕೀಯ ಪ್ರಾತಿನಿಧ್ಯ ಸಿಗದೆ, ನಮ್ಮ ಕೂಗು ಸರ್ಕಾರಕ್ಕೆ ಕೇಳಿಸುವುದಿಲ್ಲ. ಬೀದರ್‌
ನಿಂದ ಬೆಂಗಳೂರುವರೆಗೆ ರೆಡ್ಡಿ ಸಮುದಾಯದ ಜನರಿದ್ದಾರೆ. ರೆಡ್ಡಿ ಸಮುದಾಯವನ್ನು ಒಗ್ಗೂಡಿಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ‘ಹಿಂದಿನ ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮೀಸಲಾತಿ ನೀಡದೆ ಸಮುದಾಯಕ್ಕೆ ವಂಚಿಸಿವೆ. ಮುಂದಿನ ದಿನಗಳಲ್ಲಿ ರೆಡ್ಡಿ ಸಮುದಾಯ ರಾಜಕೀಯವಾಗಿ ಬೆಳೆಯಲು ಶ್ರಮಿಸುತ್ತೇವೆ’ ಎಂದರು.

ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ, ಟಿಟಿಡಿ ಸದಸ್ಯ ಎಸ್.ಆರ್.ವಿಶ್ವನಾಥ್, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಕೆಎಎಸ್ ಅಧಿಕಾರಿ ವರಪ್ರಸಾದ್ ರೆಡ್ಡಿ, ವೈದ್ಯ ಡಾ.ವಿಜಯಕುಮಾರ್, ಡಾ.ಶಶಿಧರ್, ಮಾರ್ಷಲ್ ಆರ್ಟ್ ಚಿನ್ನದ ಪದಕ ವಿಜೇತ ಸಂತೋಷ್ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT