<p><strong>ಬೆಂಗಳೂರು:</strong> ಡಯಾಲಿಸಿಸ್ಗೆ ಬಂದ ಮಹಿಳೆಗೆ ಕೊರೊನಾ ಸೋಂಕು ತಗುಲಿದ ಕಾರಣ ನಗರದ ಮಲ್ಯ ಆಸ್ಪತ್ರೆ ಚಿಕಿತ್ಸೆ ನೀಡಲು ನಿರಾಕರಿಸಿದೆ. ನಡೆಯಲು ಆಗದ ಮಹಿಳೆ ಸುಮಾರು ಎಂಟು ತಾಸು ಫುಟ್ಪಾತ್ನಲ್ಲೇ ಸಮಯ ಕಳೆದಿದ್ದಾರೆ.<br /><br />ಬಸವನಗುಡಿ ನಿವಾಸಿಯಾಗಿರುವ 58 ವರ್ಷದ ಮಹಿಳೆಯೊಬ್ಬರು ಸೋಮವಾರ ಮಧ್ಯಾಹ್ನ ಮಲ್ಯ ಆಸ್ಪತ್ರೆಗೆ ಡಯಾಲಿಸಿಸ್ಗೆ ಬಂದಿದ್ದಾರೆ. ವಾರಕ್ಕೆ ಒಮ್ಮೆ ಅವರು ಇದೇ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ, ಸೋಮವಾರ ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.<br /><br />‘ನಮ್ಮದು ಕೋವಿಡ್ಗೆ ಮೀಸಲಾಗಿರುವ ಆಸ್ಪತ್ರೆಯ ಅಲ್ಲ. ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಮಲ್ಯ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.<br /><br />ಕಾಲಿಗೆ ಏಟಾಗಿ ನಡೆಯಲು ಸಾಧ್ಯವಾಗದ ಕಾರಣ ಮಹಿಳೆ ಆಸ್ಪತ್ರೆಯ ಆವರಣದಲ್ಲಿಯೇ ಮಲಗಿದ್ದಾರೆ. ಈ ಮಹಿಳೆ ಮಾಜಿ ಶಾಸಕ ಮತ್ತು ಮಾಜಿ ಮೇಯರ್ ಚಂದ್ರಶೇಖರ್ ಅವರ ತಂಗಿ.<br /><br />‘ನನ್ನ ತಂಗಿ ಒಬ್ಬರೇ ಆಸ್ಪತ್ರೆಗೆ ಹೋಗಿದ್ದರು. ಅವರಿಗೆ ಕೋವಿಡ್ ಇರುವುದು ಗೊತ್ತಿರಲಿಲ್ಲ. ತಿಳಿದ ನಂತರ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಸಕಾಲಕ್ಕೆ ಸ್ಪಂದಿಸಿಲ್ಲ. 108ಗೆ ಸೋಮವಾರ ಕರೆ ಮಾಡಿದರೆ ಮಂಗಳವಾರ ಬೆಳಿಗ್ಗೆ ಆಂಬುಲೆನ್ಸ್ ಬಂದಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.<br /><br />ಮಲ್ಯ ಆಸ್ಪತ್ರೆಯ ಆಂಬುಲೆನ್ಸ್ನಲ್ಲಿಯೇ ಸೋಮವಾರ ರಾತ್ರಿ ರಂಗಾದೊರೈ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಿಕೊಳ್ಳಲಾಗಿದೆ. ಈಗ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.<br /><br />‘ನನಗೂ ವಯಸ್ಸಾಗಿದೆ. ತಂಗಿಯ ಜೊತೆಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಸಕಾಲಕ್ಕೆ ಚಿಕಿತ್ಸೆ ನೀಡದೆ ಮಲ್ಯ ಆಸ್ಪತ್ರೆಯ ವೈದ್ಯರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ’ ಎಂದು ಚಂದ್ರಶೇಖರ್ ದೂರಿದರು.<br /><br />‘ಯಾವುದೇ ಆಸ್ಪತ್ರೆ ಆದರೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ರೋಗಿಗಳನ್ನು ಮೊದಲು ದಾಖಲಿಸಿಕೊಳ್ಳಬೇಕು. ಸಹಾಯವಾಣಿ, ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣಕ್ಕೆ ಕಾರ್ಯಪ್ರವೃತ್ತರಾಗಬೇಕು. ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/cm-bs-yediyurappa-reaction-about-coronavirus-covid-lockdown-new-guidelines-in-karnataka-822060.html" target="_blank"> ಕೋವಿಡ್ ನಿಯಂತ್ರಣ | ಲಾಕ್ಡೌನ್ ಹೊರತುಪಡಿಸಿ ಹೆಚ್ಚಿನ ಬಿಗಿ ಕ್ರಮ: ಯಡಿಯೂರಪ್ಪ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಯಾಲಿಸಿಸ್ಗೆ ಬಂದ ಮಹಿಳೆಗೆ ಕೊರೊನಾ ಸೋಂಕು ತಗುಲಿದ ಕಾರಣ ನಗರದ ಮಲ್ಯ ಆಸ್ಪತ್ರೆ ಚಿಕಿತ್ಸೆ ನೀಡಲು ನಿರಾಕರಿಸಿದೆ. ನಡೆಯಲು ಆಗದ ಮಹಿಳೆ ಸುಮಾರು ಎಂಟು ತಾಸು ಫುಟ್ಪಾತ್ನಲ್ಲೇ ಸಮಯ ಕಳೆದಿದ್ದಾರೆ.<br /><br />ಬಸವನಗುಡಿ ನಿವಾಸಿಯಾಗಿರುವ 58 ವರ್ಷದ ಮಹಿಳೆಯೊಬ್ಬರು ಸೋಮವಾರ ಮಧ್ಯಾಹ್ನ ಮಲ್ಯ ಆಸ್ಪತ್ರೆಗೆ ಡಯಾಲಿಸಿಸ್ಗೆ ಬಂದಿದ್ದಾರೆ. ವಾರಕ್ಕೆ ಒಮ್ಮೆ ಅವರು ಇದೇ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ, ಸೋಮವಾರ ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.<br /><br />‘ನಮ್ಮದು ಕೋವಿಡ್ಗೆ ಮೀಸಲಾಗಿರುವ ಆಸ್ಪತ್ರೆಯ ಅಲ್ಲ. ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಮಲ್ಯ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.<br /><br />ಕಾಲಿಗೆ ಏಟಾಗಿ ನಡೆಯಲು ಸಾಧ್ಯವಾಗದ ಕಾರಣ ಮಹಿಳೆ ಆಸ್ಪತ್ರೆಯ ಆವರಣದಲ್ಲಿಯೇ ಮಲಗಿದ್ದಾರೆ. ಈ ಮಹಿಳೆ ಮಾಜಿ ಶಾಸಕ ಮತ್ತು ಮಾಜಿ ಮೇಯರ್ ಚಂದ್ರಶೇಖರ್ ಅವರ ತಂಗಿ.<br /><br />‘ನನ್ನ ತಂಗಿ ಒಬ್ಬರೇ ಆಸ್ಪತ್ರೆಗೆ ಹೋಗಿದ್ದರು. ಅವರಿಗೆ ಕೋವಿಡ್ ಇರುವುದು ಗೊತ್ತಿರಲಿಲ್ಲ. ತಿಳಿದ ನಂತರ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಸಕಾಲಕ್ಕೆ ಸ್ಪಂದಿಸಿಲ್ಲ. 108ಗೆ ಸೋಮವಾರ ಕರೆ ಮಾಡಿದರೆ ಮಂಗಳವಾರ ಬೆಳಿಗ್ಗೆ ಆಂಬುಲೆನ್ಸ್ ಬಂದಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.<br /><br />ಮಲ್ಯ ಆಸ್ಪತ್ರೆಯ ಆಂಬುಲೆನ್ಸ್ನಲ್ಲಿಯೇ ಸೋಮವಾರ ರಾತ್ರಿ ರಂಗಾದೊರೈ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಿಕೊಳ್ಳಲಾಗಿದೆ. ಈಗ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.<br /><br />‘ನನಗೂ ವಯಸ್ಸಾಗಿದೆ. ತಂಗಿಯ ಜೊತೆಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಸಕಾಲಕ್ಕೆ ಚಿಕಿತ್ಸೆ ನೀಡದೆ ಮಲ್ಯ ಆಸ್ಪತ್ರೆಯ ವೈದ್ಯರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ’ ಎಂದು ಚಂದ್ರಶೇಖರ್ ದೂರಿದರು.<br /><br />‘ಯಾವುದೇ ಆಸ್ಪತ್ರೆ ಆದರೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ರೋಗಿಗಳನ್ನು ಮೊದಲು ದಾಖಲಿಸಿಕೊಳ್ಳಬೇಕು. ಸಹಾಯವಾಣಿ, ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣಕ್ಕೆ ಕಾರ್ಯಪ್ರವೃತ್ತರಾಗಬೇಕು. ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/cm-bs-yediyurappa-reaction-about-coronavirus-covid-lockdown-new-guidelines-in-karnataka-822060.html" target="_blank"> ಕೋವಿಡ್ ನಿಯಂತ್ರಣ | ಲಾಕ್ಡೌನ್ ಹೊರತುಪಡಿಸಿ ಹೆಚ್ಚಿನ ಬಿಗಿ ಕ್ರಮ: ಯಡಿಯೂರಪ್ಪ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>