ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಾದೇಶಿಕ ಪಕ್ಷಗಳೇ ಅತ್ಯುತ್ತಮ ಆಯ್ಕೆ’

ಜೆಡಿಎಸ್‌ ವಕ್ತಾರ ಟಿ.ಎ. ಶರವಣ ಹೇಳಿಕೆ
Last Updated 31 ಅಕ್ಟೋಬರ್ 2020, 19:52 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ವಿಷಯ ಬಂದಾಗ ಪ್ರಾದೇಶಿಕ ಪಕ್ಷಗಳೇ ಅತ್ಯುತ್ತಮ ಆಯ್ಕೆ ಆಗಬೇಕು. ಉಪ ಚುನಾವಣೆಯಲ್ಲಿ ಜನರು ಈ ವಿಚಾರವನ್ನು ಅರಿತು ಎಚ್ಚರಿಕೆಯಿಂದ ಮತ ಚಲಾಯಿಸಬೇಕು ಎಂದು ಜೆಡಿಎಸ್‌ ವಕ್ತಾರ ಟಿ.ಎ. ಶರವಣ ಹೇಳಿದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸ್ಥಳೀಯ ಬೇಡಿಕೆಗಳ ಕುರಿತು ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚಿನ ಅರಿವು ಇರುವುದರಿಂದ ಬೇಗ ಸ್ಪಂದಿಸಲು ಸಾಧ್ಯವಾಗುತ್ತದೆ. ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ನೋಡಿದರೆ ಮನದಟ್ಟಾಗುತ್ತದೆ’ ಎಂದರು.

ರಾಜ್ಯದಲ್ಲಿ ಎಚ್‌.ಡಿ. ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅಧಿಕಾರದಲ್ಲಿ ಇದ್ದಾಗ ಎಲ್ಲ ಸಮಸ್ಯೆಗಳಿಗೂ ಕೇಂದ್ರ ಸರ್ಕಾರದ ಬಳಿ ಹೋಗಬೇಕಾದ ಪರಿಸ್ಥಿತಿ ಇರಲಿಲ್ಲ. ಜೆಡಿಎಸ್‌ ಪಕ್ಷವು ರಾಜ್ಯದ ಜತೆ ನಿಕಟವಾದ ನಂಟು ಹೊಂದಿದೆ. ಇಲ್ಲಿನ ಕೃಷಿ, ಕೈಗಾರಿಕೆಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT