<p><strong>ಕೆ.ಆರ್.ಪುರ:</strong> ಪ್ರತಿಯೊಬ್ಬ ವಿದ್ಯಾರ್ಥಿಯು ಚಿಕ್ಕಂದಿನಿಂದಲೇ ಕ್ರೀಡೆಯ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು ಎಂದು ಕೇಂದ್ರೀಯ ವಿದ್ಯಾಲಯಗಳ ಪ್ರಾದೇಶಿಕ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಹೇಳಿದರು.</p><p>ಕೆ.ಆರ್.ಪುರ ಸಮೀಪದ ಸಿ.ವಿ.ರಾಮನ್ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕೆ.ವಿ.ಡಿ.ಆರ್.ಡಿ.ಒ ಶಾಲೆಗಳ ಪ್ರಾದೇಶಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.</p><p>ಕ್ರೀಡೆಯಿಂದ ಮಾನಸಿಕ ನೆಮ್ಮದಿ ಜೊತೆಗೆ ಆರೋಗ್ಯವು ವೃದ್ದಿ ಆಗುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರು ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಹುದ್ದೆಗಳನ್ನು ಪಡೆಯಬಹುದು ಎಂದರು.</p><p>ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ನಾರಾಯಣರಾವ್, ‘ವಿದ್ಯಾರ್ಥಿಗಳಿಗಾಗಿ ಸ್ಕೇಟಿಂಗ್, ಬ್ಯಾಡ್ಮಿಂಟನ್ ಆಡಿಸಲಾಗಿತ್ತು. 200ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಭವಿಷ್ಯದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆ ಆಯೋಜಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಪ್ರತಿಯೊಬ್ಬ ವಿದ್ಯಾರ್ಥಿಯು ಚಿಕ್ಕಂದಿನಿಂದಲೇ ಕ್ರೀಡೆಯ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು ಎಂದು ಕೇಂದ್ರೀಯ ವಿದ್ಯಾಲಯಗಳ ಪ್ರಾದೇಶಿಕ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಹೇಳಿದರು.</p><p>ಕೆ.ಆರ್.ಪುರ ಸಮೀಪದ ಸಿ.ವಿ.ರಾಮನ್ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕೆ.ವಿ.ಡಿ.ಆರ್.ಡಿ.ಒ ಶಾಲೆಗಳ ಪ್ರಾದೇಶಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.</p><p>ಕ್ರೀಡೆಯಿಂದ ಮಾನಸಿಕ ನೆಮ್ಮದಿ ಜೊತೆಗೆ ಆರೋಗ್ಯವು ವೃದ್ದಿ ಆಗುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರು ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಹುದ್ದೆಗಳನ್ನು ಪಡೆಯಬಹುದು ಎಂದರು.</p><p>ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ನಾರಾಯಣರಾವ್, ‘ವಿದ್ಯಾರ್ಥಿಗಳಿಗಾಗಿ ಸ್ಕೇಟಿಂಗ್, ಬ್ಯಾಡ್ಮಿಂಟನ್ ಆಡಿಸಲಾಗಿತ್ತು. 200ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಭವಿಷ್ಯದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆ ಆಯೋಜಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>