ಕುಲಸಚಿವ ಪ್ರೊ.ಕೆ.ಜನಾರ್ದನಮ್ ಅವರು ಸಿಬ್ಬಂದಿಯೊಬ್ಬರ ಜತೆಗೆ ಸೇರಿಕೊಂಡು ₹ 13.73 ಲಕ್ಷ ಹಣವನ್ನು ತಮ್ಮ ಖಾತೆಯಲ್ಲಿ ಠೇವಣಿ ಇರಿಸಿದ್ದರು ಎಂದು ಆರೋಪಿಸಲಾಗಿತ್ತು. ಸಿಂಡಿಕೇಟ್ ಸಭೆಯ ಬಳಿಕ ವಿಶ್ವವಿದ್ಯಾಲಯದ ಅಧಿಕಾರಿಗಳು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ ಮೇರೆಗೆ ಕುಲಸಚಿವರಾಗಿ ಅವರನ್ನು ನೇಮಕ ಮಾಡಿದ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆ ಹಿಂದಕ್ಕೆ ಪಡೆದು, ಈ ಹಿಂದಿನ ಬೆಂಗಳೂರು ವಿಶ್ವವಿದ್ಯಾಲಯದ ವಿಭಾಗಕ್ಕೆ ಕಳುಹಿಸಿದೆ.