ಕೆಎಸ್ಪಿಸಿಬಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು, ‘ಸಣ್ಣ ಕೈಗಾರಿಗೆಳು ಸಮ್ಮತಿ ಪತ್ರ ಪಡೆಯಲು ಇದ್ದ ಅಡೆತಡೆಗಳನ್ನು ನಿವಾರಿಸಿ, ಅರ್ಜಿಯನ್ನು ಸರಳೀಕರಣ ಮಾಡಲಾಗಿದೆ. ಸಾವಿರಾರು ಕೈಗಾರಿಕೆಗಳು ನೋಂದಣಿ ಮಾಡಿಸಿಕೊಂಡಿಲ್ಲ. ಡಿ.20ರವರೆಗೂ ಕಾಸಿಯಾ ಕೇಂದ್ರ ಕಚೇರಿ ಹಾಗೂ ಪೀಣ್ಯದ ಕೈಗಾರಿಕಾ ಪ್ರದೇಶದಲ್ಲಿ ಸಮ್ಮತಿ ಪತ್ರಗಳನ್ನು ವಿತರಿಸಲಾಗುತ್ತದೆ. ಸಣ್ಣ ಕೈಗಾರಿಕೆಗಳು ಇದರ ಲಾಭ ಪಡೆದುಕೊಳ್ಳಬೇಕು. ಇದರಿಂದ ಮಂಡಳಿಗೆ ಆದಾಯ ಕೂಡ ಬರಲಿದೆ' ಎಂದರು.