ಬೆಂಗಳೂರು: ಲಾಕ್ಡೌನ್ ತೆರವಾದ ನಂತರ ವಾಹನಗಳ ದಟ್ಟಣೆ ಹೆಚ್ಚಾಗಿದೆ. ದಟ್ಟಣೆ ನಿಯಂತ್ರಣಕ್ಕಾಗಿ ಕರ್ತವ್ಯ ನಿರತ ಕಾನ್ಸ್ಟೆಬಲ್ಗಳು, ರಸ್ತೆಯಲ್ಲಿ ಹಾದುಹೋಗುವ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡುವುದರಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಸೆಲ್ಯೂಟ್ ಮಾಡುವ ಬದಲು ದಟ್ಟಣೆ ತಡೆಯಲು ಒತ್ತು ನೀಡುವಂತೆ ಗೃಹ ಇಲಾಖೆ ಕಾರ್ಯದರ್ಶಿ ಡಿ. ರೂಪಾ ಟ್ವೀಟ್ ಮಾಡಿದ್ದಾರೆ.