<p><strong>ಬೆಂಗಳೂರು: </strong>ಜಾತಿಗಳನ್ನು ವಿಭಜಿಸಿ, ಕೋಮುಗಳ ಮಧ್ಯೆ ಧ್ವೇಷ ಬಿತ್ತಿ ಅಧಿಕಾರ ಪಡೆಯುವ ರಾಜಕಾರಣ<br />ವನ್ನು ತಿರಸ್ಕರಿಸುವ ಮೂಲಕ ದಲಿತರು, ಶೂದ್ರರು ಅಂಬೇಡ್ಕರ್ ಅವರ ಆಶಯ ಗಳನ್ನು ಪೂರ್ಣಗೊಳಿಸಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.</p>.<p>ಹೆಣ್ಣೂರು ಶ್ರೀನಿವಾಸ್ ನೇತೃತ್ವದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಸಮಾನತಾ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಹಣ, ಆಮಿಷಗಳಿಗೆ ಮತ ಮಾರಿ ಕೊಂಡ ಪರಿಣಾಮಗಳನ್ನು ಅನುಭವಿಸುತ್ತಿದ್ದೇವೆ. ಅಂಬೇಡ್ಕರ್ ಅನುಯಾಯಿಗಳಿಂದ ಮತ ಪಡೆದು ಅಧಿಕಾರಕ್ಕೆ ಬಂದವರೇ ಇಂದು ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಿದ್ದಾರೆ ’ ಎಂದರು.</p>.<p>ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಲ್ಲಿ ಮತ್ತೆ ಹಳೆಯ ಪದ್ಧತಿಗೆ ಜಾರುತ್ತಿದೆ. ಸಾವಿರಾರು ವಿದ್ಯಾರ್ಥಿಗಳು ತರಗತಿಗಳಿಂದ ಹೊರಗೆ ಉಳಿಯುತ್ತಿದ್ದಾರೆ. ಪರಿಶಿಷ್ಟರ ಶಿಕ್ಷಣಕ್ಕೆ ಕುತ್ತು ಬಂದಿದೆ ಎಂದರು.</p>.<p>ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಬಿ.ಗೋಪಾಲ್, ಭಾರತದಲ್ಲಿ ಜನಿಸಿದ ಎಲ್ಲ ವರ್ಗಗಳಿಗೂ ಮತದಾನದ ಹಕ್ಕು ಸಿಗುವಂತೆ ಮಾಡಿದ್ದು ಅಂಬೇಡ್ಕರ್. ಇಂತಹ ಹಕ್ಕಿನ ಸದ್ಬಳಕೆಯಾಗಬೇಕು ಎಂದರು.</p>.<p>ಪ್ರಾಸ್ತಾವಿಕ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ‘ವೇದಗಳಲ್ಲೇ ಪ್ರಜಾಪ್ರಭುತ್ವ ಇತ್ತು ಎನ್ನುವ ವಾದ ಒಪ್ಪಲು ಸಾಧ್ಯವಿಲ್ಲ. ಅಂದು ಪ್ರಜಾಪ್ರಭುತ್ವ ಇದ್ದಿದ್ದರೆ ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವರ್ತನೆಗಳು ಏಕೆ ಜೀವಂತವಾಗಿ ಇರುತ್ತಿದ್ದವು’ ಎಂದರು.</p>.<p>ನಿವೃತ್ತ ನ್ಯಾಯಾದೀಶ ಜಿ.ಕೆ.ಗೋಕುಲೆ, ಮುಖಂಡರಾದ ಬಸವ ರಾಜ್ ಕೌತಾಳ್, ವಿಜಯನರಸಿಂಹ, ಸತ್ಯ ಭದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಾತಿಗಳನ್ನು ವಿಭಜಿಸಿ, ಕೋಮುಗಳ ಮಧ್ಯೆ ಧ್ವೇಷ ಬಿತ್ತಿ ಅಧಿಕಾರ ಪಡೆಯುವ ರಾಜಕಾರಣ<br />ವನ್ನು ತಿರಸ್ಕರಿಸುವ ಮೂಲಕ ದಲಿತರು, ಶೂದ್ರರು ಅಂಬೇಡ್ಕರ್ ಅವರ ಆಶಯ ಗಳನ್ನು ಪೂರ್ಣಗೊಳಿಸಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.</p>.<p>ಹೆಣ್ಣೂರು ಶ್ರೀನಿವಾಸ್ ನೇತೃತ್ವದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಸಮಾನತಾ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಹಣ, ಆಮಿಷಗಳಿಗೆ ಮತ ಮಾರಿ ಕೊಂಡ ಪರಿಣಾಮಗಳನ್ನು ಅನುಭವಿಸುತ್ತಿದ್ದೇವೆ. ಅಂಬೇಡ್ಕರ್ ಅನುಯಾಯಿಗಳಿಂದ ಮತ ಪಡೆದು ಅಧಿಕಾರಕ್ಕೆ ಬಂದವರೇ ಇಂದು ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಿದ್ದಾರೆ ’ ಎಂದರು.</p>.<p>ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಲ್ಲಿ ಮತ್ತೆ ಹಳೆಯ ಪದ್ಧತಿಗೆ ಜಾರುತ್ತಿದೆ. ಸಾವಿರಾರು ವಿದ್ಯಾರ್ಥಿಗಳು ತರಗತಿಗಳಿಂದ ಹೊರಗೆ ಉಳಿಯುತ್ತಿದ್ದಾರೆ. ಪರಿಶಿಷ್ಟರ ಶಿಕ್ಷಣಕ್ಕೆ ಕುತ್ತು ಬಂದಿದೆ ಎಂದರು.</p>.<p>ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಬಿ.ಗೋಪಾಲ್, ಭಾರತದಲ್ಲಿ ಜನಿಸಿದ ಎಲ್ಲ ವರ್ಗಗಳಿಗೂ ಮತದಾನದ ಹಕ್ಕು ಸಿಗುವಂತೆ ಮಾಡಿದ್ದು ಅಂಬೇಡ್ಕರ್. ಇಂತಹ ಹಕ್ಕಿನ ಸದ್ಬಳಕೆಯಾಗಬೇಕು ಎಂದರು.</p>.<p>ಪ್ರಾಸ್ತಾವಿಕ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ‘ವೇದಗಳಲ್ಲೇ ಪ್ರಜಾಪ್ರಭುತ್ವ ಇತ್ತು ಎನ್ನುವ ವಾದ ಒಪ್ಪಲು ಸಾಧ್ಯವಿಲ್ಲ. ಅಂದು ಪ್ರಜಾಪ್ರಭುತ್ವ ಇದ್ದಿದ್ದರೆ ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವರ್ತನೆಗಳು ಏಕೆ ಜೀವಂತವಾಗಿ ಇರುತ್ತಿದ್ದವು’ ಎಂದರು.</p>.<p>ನಿವೃತ್ತ ನ್ಯಾಯಾದೀಶ ಜಿ.ಕೆ.ಗೋಕುಲೆ, ಮುಖಂಡರಾದ ಬಸವ ರಾಜ್ ಕೌತಾಳ್, ವಿಜಯನರಸಿಂಹ, ಸತ್ಯ ಭದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>