‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಾರಿ ಮಾಡಲಾದ ಈ ನೀತಿಗೆ, ದೇಶದ ಪ್ರಮುಖ ಶಿಕ್ಷಣ ತಜ್ಞರು ಶ್ರಮಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡದೆಯೇ, ಸರಿ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಬೇಕು ಎಂಬುದು ಈ ನೀತಿಯ ಆಶಯ. ಇದರಿಂದ ನವೋದ್ಯಮಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಸರ್ಕಾರ ಬದಲಾದಂತೆ ಶಿಕ್ಷಣ ನೀತಿಗಳನ್ನು ಬದಲಾಯಿಸಬಾರದು’ ಎಂದು ತಿಳಿಸಿದರು.