‘ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು ಬಿಎಂಆರ್ಸಿಎಲ್ ಎಸ್ಸಿ–ಎಸ್ಟಿ ಎಂಪ್ಲಾಯಿಸ್ ವೆಲ್ಫೇರ್ ಅಸೋಸಿಯೇಶನ್ ತಯಾರಿ ನಡೆಸಿತ್ತು. ಆದರೆ, ಗಾಂಧೀಜಿ ಫೋಟೊ ಸಾಕೆಂದು ಅಧಿಕಾರಿ ಶಂಕರ್ ತಿಳಿಸಿದ್ದರು. ಕಾರ್ಯಕ್ರಮ ಸರಾಗವಾಗಿ ನಡೆಯಲಿ ಎಂಬ ಕಾರಣಕ್ಕೆ ಅವತ್ತು ಯಾವುದೇ ಪ್ರತಿಭಟನೆ ಮಾಡಿಲ್ಲ. ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು. ಮೂರು ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.