<p><strong>ಬೆಂಗಳೂರು: </strong>ಜೀವನ್ಬಿಮಾನಗರ ಠಾಣೆ ವ್ಯಾಪ್ತಿಯಲ್ಲಿ ವೆಂಕಟೇಶ್ ಕೊಲೆಯಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ನ್ಯೂ ತಿಪ್ಪಸಂದ್ರದ ಹನುಮಾನ್ ನಗರದ ಆರ್. ವಿನಯ್ (19) ಹಾಗೂ ಎಸ್. ಮೋಹನ್ (18) ಬಂಧಿತರು. ಕೊಲೆ ನಡೆದ 12 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ವಿನಯ್, ಮಲಗುವ ಹಾಸಿಗೆ ವಿಚಾರವಾಗಿ ತನ್ನ ಸಹೋದರನ ಜೊತೆ ಜಗಳ ತೆಗೆದಿದ್ದ. ಸಂಬಂಧಿಯೂ ಆಗಿದ್ದ ವೆಂಕಟೇಶ್ ಜಗಳ ಬಿಡಿಸಲು ಬಂದಿದ್ದರು. ಅವರ ಜೊತೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು.’</p>.<p>‘ಸ್ನೇಹಿತ ಮೋಹನ್ನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ವಿನಯ್, ಗಲಾಟೆ ಮಾಡಲಾರಂಭಿಸಿದ್ದ. ಅದೇ ಸಂದರ್ಭದಲ್ಲೇ ವೆಂಕಟೇಶ್ ತಲೆಗೆ ದೊಣ್ಣೆಯಿಂದ ಹೊಡೆದಿದ್ದ. ಗಾಜಿನ ಚೂರುಗಳಿಂದ ಎದೆಗೆ ಹಲವು ಬಾರಿ ಇರಿದಿದ್ದ. ಇದರಿಂದ ತೀವ್ರ ಗಾಯಗೊಂಡು ವೆಂಕಟೇಶ್ ಮೃತಪಟ್ಟಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಯಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜೀವನ್ಬಿಮಾನಗರ ಠಾಣೆ ವ್ಯಾಪ್ತಿಯಲ್ಲಿ ವೆಂಕಟೇಶ್ ಕೊಲೆಯಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ನ್ಯೂ ತಿಪ್ಪಸಂದ್ರದ ಹನುಮಾನ್ ನಗರದ ಆರ್. ವಿನಯ್ (19) ಹಾಗೂ ಎಸ್. ಮೋಹನ್ (18) ಬಂಧಿತರು. ಕೊಲೆ ನಡೆದ 12 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ವಿನಯ್, ಮಲಗುವ ಹಾಸಿಗೆ ವಿಚಾರವಾಗಿ ತನ್ನ ಸಹೋದರನ ಜೊತೆ ಜಗಳ ತೆಗೆದಿದ್ದ. ಸಂಬಂಧಿಯೂ ಆಗಿದ್ದ ವೆಂಕಟೇಶ್ ಜಗಳ ಬಿಡಿಸಲು ಬಂದಿದ್ದರು. ಅವರ ಜೊತೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು.’</p>.<p>‘ಸ್ನೇಹಿತ ಮೋಹನ್ನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ವಿನಯ್, ಗಲಾಟೆ ಮಾಡಲಾರಂಭಿಸಿದ್ದ. ಅದೇ ಸಂದರ್ಭದಲ್ಲೇ ವೆಂಕಟೇಶ್ ತಲೆಗೆ ದೊಣ್ಣೆಯಿಂದ ಹೊಡೆದಿದ್ದ. ಗಾಜಿನ ಚೂರುಗಳಿಂದ ಎದೆಗೆ ಹಲವು ಬಾರಿ ಇರಿದಿದ್ದ. ಇದರಿಂದ ತೀವ್ರ ಗಾಯಗೊಂಡು ವೆಂಕಟೇಶ್ ಮೃತಪಟ್ಟಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಯಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>