ಇಲ್ಲಿನ ಶ್ಯಾಂಪುರ ರೈಲ್ವೆ ಗೇಟ್ ಸಮೀಪದ ರುಷದ್ ನಗರದಲ್ಲಿರುವ ‘ಗ್ಲೋರಿ ಬ್ಯಾಗ್ಸ್’ ಕಾರ್ಖಾನೆ ಮೇಲೆ ದಾಳಿ ನಡೆದಿದ್ದು, ಈ ಕಾರ್ಖಾನೆಯಲ್ಲಿ 5 ರಿಂದ 17ವರ್ಷದೊಳಗಿನ ಮಕ್ಕಳು ದುಡಿಯುತ್ತಿದ್ದರು. ಇವರೆಲ್ಲರೂ ಬಿಹಾರದ ಚಂಪಾರಣ್ ಜಿಲ್ಲೆಯವರು ಎಂದು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ನಾಗರಾಜಯ್ಯ ಕೆ.ಜಿ ಹಳ್ಳಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.