<p><strong>ಬೆಂಗಳೂರು</strong>: ‘ಕೆಲವು ಕಾವಿಧಾರಿಗಳು ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಗುರುಗಳು ದೇವರಲ್ಲ, ಅವರೂ ನಮ್ಮಂತೆ ಮನುಷ್ಯರು’ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಎಸ್. ಕಾಶಪ್ಪನವರ್ ಅಭಿಪ್ರಾಯಪಟ್ಟರು. </p>.<p>ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸುವಂತೆ ವೀರಶೈವ, ಲಿಂಗಾಯತ ಧರ್ಮದ ಕೆಲ ಸ್ವಾಮೀಜಿಗಳು ಕರೆ ಕೊಟ್ಟಿದ್ದರು. ಸ್ವಾಮೀಜಿಗಳನ್ನು ಸೃಷ್ಟಿಸಿರುವುದೇ ಭಕ್ತರು. ಆ ಭಕ್ತರು ಹೇಳಿದಂತೆ ಸ್ವಾಮೀಜಿಗಳು ಕೇಳಬೇಕು. ಆದರೆ, ಕೆಲ ಸ್ವಾಮೀಜಿಗಳು ದಾರಿತಪ್ಪಿಸುತ್ತಿದ್ದಾರೆ. ಅವರಿಗೆ ತಮ್ಮ ನಡವಳಿಕೆ ಬಗ್ಗೆ ಅರಿವಿರಬೇಕು’ ಎಂದು ಹೇಳಿದರು. </p>.<p>‘ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಾರಂಭವಾದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹ 100 ಕೋಟಿ ಅನುದಾನ ನೀಡಿದ್ದರು. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದಾಗ, ನಿಗಮಕ್ಕೆ ₹ 300 ಕೋಟಿ ಅನುದಾನ ನೀಡಿದ್ದಾರೆ. ಈ ಹಣವನ್ನು ಸಮರ್ಪಕವಾಗಿ ಸಮುದಾಯದ ಯೋಜನೆಗಳಿಗೆ ಬಳಕೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶರಣಬಸಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೆಲವು ಕಾವಿಧಾರಿಗಳು ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಗುರುಗಳು ದೇವರಲ್ಲ, ಅವರೂ ನಮ್ಮಂತೆ ಮನುಷ್ಯರು’ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಎಸ್. ಕಾಶಪ್ಪನವರ್ ಅಭಿಪ್ರಾಯಪಟ್ಟರು. </p>.<p>ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸುವಂತೆ ವೀರಶೈವ, ಲಿಂಗಾಯತ ಧರ್ಮದ ಕೆಲ ಸ್ವಾಮೀಜಿಗಳು ಕರೆ ಕೊಟ್ಟಿದ್ದರು. ಸ್ವಾಮೀಜಿಗಳನ್ನು ಸೃಷ್ಟಿಸಿರುವುದೇ ಭಕ್ತರು. ಆ ಭಕ್ತರು ಹೇಳಿದಂತೆ ಸ್ವಾಮೀಜಿಗಳು ಕೇಳಬೇಕು. ಆದರೆ, ಕೆಲ ಸ್ವಾಮೀಜಿಗಳು ದಾರಿತಪ್ಪಿಸುತ್ತಿದ್ದಾರೆ. ಅವರಿಗೆ ತಮ್ಮ ನಡವಳಿಕೆ ಬಗ್ಗೆ ಅರಿವಿರಬೇಕು’ ಎಂದು ಹೇಳಿದರು. </p>.<p>‘ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಾರಂಭವಾದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹ 100 ಕೋಟಿ ಅನುದಾನ ನೀಡಿದ್ದರು. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದಾಗ, ನಿಗಮಕ್ಕೆ ₹ 300 ಕೋಟಿ ಅನುದಾನ ನೀಡಿದ್ದಾರೆ. ಈ ಹಣವನ್ನು ಸಮರ್ಪಕವಾಗಿ ಸಮುದಾಯದ ಯೋಜನೆಗಳಿಗೆ ಬಳಕೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶರಣಬಸಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>