<p><strong>ಬೆಂಗಳೂರು: </strong>ರೆಮ್ಡಿಸಿವಿರ್ ಚುಚ್ಚುಮದ್ದಿಗೆ ₹ 15 ಸಾವಿರ ಪಡೆದಿದ್ದ ಹಾಗೂ ಸೋಂಕಿತ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದ ಆರೋಪದಡಿ ವಿಜಯನಗರದ ಭಾರತಿ ಆಸ್ಪತ್ರೆ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>'ಬಿಬಿಎಂಪಿ ವೈದ್ಯ ಡಾ. ರಾಜೇಂದ್ರ ನೀಡಿರುವ ದೂರಿನಡಿ ಆಸ್ಪತ್ರೆ ವಿರುದ್ಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.</p>.<p>'ಕೊರೊನಾ ಸೋಂಕಿತ ಮಹಿಳೆ ಚಿಕಿತ್ಸೆಗಾಗಿ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಂದ ₹15 ಸಾವಿರ ಪಡೆದಿದ್ದ ಆಸ್ಪತ್ರೆಯವರು, ರೆಮ್ಡಿಸಿವಿರ್ ಚುಚ್ಚುಮದ್ದು ನೀಡಿದ್ದರು. ದುಬಾರಿ ಬೆಲೆ ಪಡೆದಿದ್ದನ್ನು ಪ್ರಶ್ನಿಸಿದ್ದ ಸೋಂಕಿತೆ ಕಡೆಯವರು, ಔಷಧ ನಿಯಂತ್ರಕರಿಗೆ ದೂರು ನೀಡಿದ್ದರು.'</p>.<p>'ದೂರು ನೀಡಿದ್ದಕ್ಕೆ ಗರಂ ಆದ ಆಸ್ಪತ್ರೆ ವೈದ್ಯರು, ಚಿಕಿತ್ಸೆ ನೀಡಲು ಆಗುವುದಿಲ್ಲವೆಂದು ಏಕಾಏಕಿ ಸೋಂಕಿತೆಯನ್ನು ಆಸ್ಪತ್ರೆಯಿಂದ ಹೊರಗೆ ಹಾಕಿದ್ದರು. ದಿಕ್ಕು ತೋಚದಂತಾದ ಸಂಬಂಧಿಕರು, ಮಹಿಳೆಯನ್ನು ಬೇರೊಂದು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ತೀರಿಕೊಂಡರು' ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೆಮ್ಡಿಸಿವಿರ್ ಚುಚ್ಚುಮದ್ದಿಗೆ ₹ 15 ಸಾವಿರ ಪಡೆದಿದ್ದ ಹಾಗೂ ಸೋಂಕಿತ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದ ಆರೋಪದಡಿ ವಿಜಯನಗರದ ಭಾರತಿ ಆಸ್ಪತ್ರೆ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>'ಬಿಬಿಎಂಪಿ ವೈದ್ಯ ಡಾ. ರಾಜೇಂದ್ರ ನೀಡಿರುವ ದೂರಿನಡಿ ಆಸ್ಪತ್ರೆ ವಿರುದ್ಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.</p>.<p>'ಕೊರೊನಾ ಸೋಂಕಿತ ಮಹಿಳೆ ಚಿಕಿತ್ಸೆಗಾಗಿ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಂದ ₹15 ಸಾವಿರ ಪಡೆದಿದ್ದ ಆಸ್ಪತ್ರೆಯವರು, ರೆಮ್ಡಿಸಿವಿರ್ ಚುಚ್ಚುಮದ್ದು ನೀಡಿದ್ದರು. ದುಬಾರಿ ಬೆಲೆ ಪಡೆದಿದ್ದನ್ನು ಪ್ರಶ್ನಿಸಿದ್ದ ಸೋಂಕಿತೆ ಕಡೆಯವರು, ಔಷಧ ನಿಯಂತ್ರಕರಿಗೆ ದೂರು ನೀಡಿದ್ದರು.'</p>.<p>'ದೂರು ನೀಡಿದ್ದಕ್ಕೆ ಗರಂ ಆದ ಆಸ್ಪತ್ರೆ ವೈದ್ಯರು, ಚಿಕಿತ್ಸೆ ನೀಡಲು ಆಗುವುದಿಲ್ಲವೆಂದು ಏಕಾಏಕಿ ಸೋಂಕಿತೆಯನ್ನು ಆಸ್ಪತ್ರೆಯಿಂದ ಹೊರಗೆ ಹಾಕಿದ್ದರು. ದಿಕ್ಕು ತೋಚದಂತಾದ ಸಂಬಂಧಿಕರು, ಮಹಿಳೆಯನ್ನು ಬೇರೊಂದು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ತೀರಿಕೊಂಡರು' ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>