ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಚಂದ್ರ ವಿದ್ಯಾಸಾಗರ ಅವರಿಗೆ ಸಮರ್ಪಣಾ ಸಪ್ತಾಹ

Last Updated 4 ಆಗಸ್ಟ್ 2020, 23:18 IST
ಅಕ್ಷರ ಗಾತ್ರ

ಬೆಂಗಳೂರು:ಮಹಿಳಾ ಶಿಕ್ಷಣ ಹರಿಕಾರ ಈಶ್ವರಚಂದ್ರ ವಿದ್ಯಾಸಾಗರ ಅವರ ಸ್ಮರಣ ದಿನದ ಅಂಗವಾಗಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‍ಎಸ್) ವತಿಯಿಂದ 'ಸಮರ್ಪಣಾ ಸಪ್ತಾಹ' ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಶ್ವರಚಂದ್ರ ವಿದ್ಯಾಸಾಗರ ಅವರು ಅಗಲಿದ ದಿನವಾದ ಜು.29ರಿಂದ ಆಗಸ್ಟ್ 4ರವರೆಗೆ ಸಂಘಟನೆಯು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿತ್ತು.

'ಸಾಮಾಜಿಕ ಪಿಡುಗುಗಳಾದ ಬಾಲ್ಯವಿವಾಹ, ಬಹುಪತ್ನಿತ್ವ ವಿರುದ್ಧ ದನಿ ಎತ್ತುವ ಮೂಲಕ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ವಿದ್ಯಾಸಾಗರ ಅವರ ಸ್ಮರಣಾರ್ಥ ಒಂದು ವಾರದವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡೆವು' ಎಂದು ಸಂಘಟನೆಯ ಕಾರ್ಯದರ್ಶಿ ಎ.ಶಾಂತಾ ತಿಳಿಸಿದರು.

'ಸಪ್ತಾಹದ ಅಂಗವಾಗಿ ವಿದ್ಯಾಸಾಗರರ ಭಾವಚಿತ್ರ ರಚನೆ, ಪ್ರಗತಿಪರ ಗೀತೆಗಳು, ನೃತ್ಯ, ನಾಟಕಗಳು, ಕವನ ವಾಚನ, ಮಹಿಳೆಯರ ಸಮಸ್ಯೆಗಳನ್ನು ಕುರಿತ ವಿಷಯ ಮಂಡನೆಗಳು ನಡೆದವು. ಆನ್‍ಲೈನ್ ಮೂಲಕ ಚರ್ಚೆ ಹಮ್ಮಿಕೊಳ್ಳಲಾಯಿತು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT