<p><strong>ಬೆಂಗಳೂರು:</strong> ‘ನಗರದಲ್ಲಿ ಕೋವಿಡ್ ಕುರಿತ ಜಾಗೃತಿ ಸಂದೇಶಗಳನನ್ನು ಒಳಗೊಂಡ ಜಾಹೀರಾತು ಫಲಕಗಳನ್ನು ಅಳವಡಿಸಿಕೊಳ್ಳಲು ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೀತಿಯ ಎಲ್ಲಾ ಫಲಕಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದೆ.</p>.<p>ಅನಧಿಕೃತ ಜಾಹೀರಾತು ಫಲಕಗಳನ್ನು ನಗರದಲ್ಲಿ ಅಳವಡಿಸಿರುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>‘ಕೋವಿಡ್ ಬಗ್ಗೆ ಜಾಗೃತಿ ಸಂದೇಶಗಳನ್ನು ಪ್ರದರ್ಶನ ಮಾಡಲು ಅನುಮತಿ ನೀಡುವಂತೆ ಸರ್ಕಾರ ಮಾಡಿದ್ದ ಮನವಿಗೆ ಸ್ಪಂದಿಸಿ ಹೈಕೋರ್ಟ್ ಅವಕಾಶ ನೀಡಿತ್ತು. ಆದರೆ, ಖಾಸಗಿ ಉತ್ಪನ್ನಗಳ ಜಾಹೀರಾತಿಗೆ ಈ ಫಲಕಗಳು ಬಳಕೆಯಾಗುತ್ತಿವೆ’ ಎಂದು ಅರ್ಜಿದಾರ ಮಾಯಿಗೌಡ ಚಿತ್ರಗಳನ್ನು ಪೀಠಕ್ಕೆ ಸಲ್ಲಿಸಿದರು.</p>.<p>‘ಫಲಕ ಅಳವಡಿಸಿಕೊಳ್ಳಲು 2020ರ ಜುಲೈ 15ರಂದು ನೀಡಿರುವ ಆದೇಶವನ್ನು ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಈ ಆದೇಶವನ್ನು ಏಕೆ ಹಿಂದಕ್ಕೆ ಪಡೆಯಬಾರದು’ ಎಂದು ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಗರದಲ್ಲಿ ಕೋವಿಡ್ ಕುರಿತ ಜಾಗೃತಿ ಸಂದೇಶಗಳನನ್ನು ಒಳಗೊಂಡ ಜಾಹೀರಾತು ಫಲಕಗಳನ್ನು ಅಳವಡಿಸಿಕೊಳ್ಳಲು ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೀತಿಯ ಎಲ್ಲಾ ಫಲಕಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದೆ.</p>.<p>ಅನಧಿಕೃತ ಜಾಹೀರಾತು ಫಲಕಗಳನ್ನು ನಗರದಲ್ಲಿ ಅಳವಡಿಸಿರುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>‘ಕೋವಿಡ್ ಬಗ್ಗೆ ಜಾಗೃತಿ ಸಂದೇಶಗಳನ್ನು ಪ್ರದರ್ಶನ ಮಾಡಲು ಅನುಮತಿ ನೀಡುವಂತೆ ಸರ್ಕಾರ ಮಾಡಿದ್ದ ಮನವಿಗೆ ಸ್ಪಂದಿಸಿ ಹೈಕೋರ್ಟ್ ಅವಕಾಶ ನೀಡಿತ್ತು. ಆದರೆ, ಖಾಸಗಿ ಉತ್ಪನ್ನಗಳ ಜಾಹೀರಾತಿಗೆ ಈ ಫಲಕಗಳು ಬಳಕೆಯಾಗುತ್ತಿವೆ’ ಎಂದು ಅರ್ಜಿದಾರ ಮಾಯಿಗೌಡ ಚಿತ್ರಗಳನ್ನು ಪೀಠಕ್ಕೆ ಸಲ್ಲಿಸಿದರು.</p>.<p>‘ಫಲಕ ಅಳವಡಿಸಿಕೊಳ್ಳಲು 2020ರ ಜುಲೈ 15ರಂದು ನೀಡಿರುವ ಆದೇಶವನ್ನು ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಈ ಆದೇಶವನ್ನು ಏಕೆ ಹಿಂದಕ್ಕೆ ಪಡೆಯಬಾರದು’ ಎಂದು ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>