<p><strong>ಬೆಂಗಳೂರು:</strong> ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ 25,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ರಾಜ್ಯ ಹೊಂದಿದೆ ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದರು.</p>.<p>ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮವು (ಕ್ರೆಡಲ್) ನಗರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ‘ನವೀಕರಿಸಬಹುದಾದ ಇಂಧನದ ಭವಿಷ್ಯವನ್ನು ಭಾರತವು ಹೇಗೆ ಜವಾಬ್ದಾರಿಯುತವಾಗಿಸಬಹುದು’ ಪುಸ್ತಕವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಹೂಡಿಕೆದಾರರು ಮತ್ತು ಜನರ ಸಹಯೋಗದೊಂದಿಗೆ ಈ ಗುರಿಯನ್ನು ಸಾಧಿಸುತ್ತೇವೆ. ಸೌರಶಕ್ತಿ ಮತ್ತು ಪವನ ಶಕ್ತಿ ಮೂಲದಿಂದ ವಿದ್ಯುತ್ ಉತ್ಪಾದನೆ ಮಾಡಲು ಸಾಕಷ್ಟು ಭೂಮಿ ಬೇಕಾಗುತ್ತದೆ. ಆದರೆ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತವಾಗುತ್ತದೆ. ಇಂತಹ ಯೋಜನೆಗಳಿಗೆ ಇದೇ ದೊಡ್ಡ ತೊಡಕು’ ಎಂದರು.</p>.<p>‘ಈ ಯೋಜನೆಗಳಿಂದ ತಮಗೆ ತೊಂದರೆಯಾಗುತ್ತದೆ ಎಂದು ಜನರು ವಿರೋಧ ವ್ಯಕ್ತಪಡಿಸುತ್ತಾರೆ. ಹೂಡಿಕೆದಾರರು ಅದನ್ನೇ ದೊಡ್ಡ ತೊಡಕು ಎಂದು ಪರಿಗಣಿಸುತ್ತಾರೆ. ನವೀಕರಿಸಬಹುದಾದ ಇಂಧನ ಮೂಲಗಳೇ ದೇಶದ ಭವಿಷ್ಯ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಟ್ಟರೆ, ಇಂತಹ ಯೋಜನೆಗಳ ಅನುಷ್ಠಾನ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ’ ಎಂದರು.</p>.<p>ಕ್ರೆಡಲ್ ಅಧ್ಯಕ್ಷ ಮತ್ತು ಶಾಸಕ ಟಿ.ಡಿ.ರಾಜೇಗೌಡ, ‘ಈ ಕ್ಷೇತ್ರದಲ್ಲಿ ರಾಜ್ಯವು ಉತ್ತಮ ಸಾಧನೆ ಮಾಡಿದ್ದು, ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಬಜೆಟ್ನಲ್ಲಿ ‘ಮುಖ್ಯಮಂತ್ರಿ ಸೌರಶಕ್ತಿ ಯೋಜನೆ’ಯನ್ನು ಘೋಷಿಸಲಾಗಿದ್ದು, ಈ ಸ್ವರೂಪದ ಎಲ್ಲ ಯೋಜನೆಗಳನ್ನೂ ಅದು ಒಳಗೊಳ್ಳಲಿದೆ’ ಎಂದರು.</p>.<p>‘ಅಭಿವೃದ್ಧಿಪರ ಯೋಜನೆಗಳ ರೂಪುರೇಷೆ ಮತ್ತು ಅನುಷ್ಠಾನದ ಗುಣಮಟ್ಟ ಹೆಚ್ಚಿಸಬೇಕಾದ ಅಗತ್ಯವಿದೆ. ಲೋಪಗಳನ್ನು ಸರಿಪಡಿಸಿಕೊಂಡು, ಹೂಡಿಕೆದಾರರು ಮತ್ತು ಜನರ ಮಧ್ಯೆ ಸಮನ್ವಯ ಸಾಧಿಸಬೇಕಿದೆ’ ಎಂದರು.</p>.<p>ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಯ್ಯ, ಸಿಇಇಡಬ್ಲ್ಯು ನಿರ್ದೇಶಕ ಕಾರ್ತಿಕ್ ಗಣೇಶ್, ಇಂಧನ ಇಲಾಖೆ ಅಧಿಕಾರಿಗಳು, ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ 25,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ರಾಜ್ಯ ಹೊಂದಿದೆ ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದರು.</p>.<p>ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮವು (ಕ್ರೆಡಲ್) ನಗರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ‘ನವೀಕರಿಸಬಹುದಾದ ಇಂಧನದ ಭವಿಷ್ಯವನ್ನು ಭಾರತವು ಹೇಗೆ ಜವಾಬ್ದಾರಿಯುತವಾಗಿಸಬಹುದು’ ಪುಸ್ತಕವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಹೂಡಿಕೆದಾರರು ಮತ್ತು ಜನರ ಸಹಯೋಗದೊಂದಿಗೆ ಈ ಗುರಿಯನ್ನು ಸಾಧಿಸುತ್ತೇವೆ. ಸೌರಶಕ್ತಿ ಮತ್ತು ಪವನ ಶಕ್ತಿ ಮೂಲದಿಂದ ವಿದ್ಯುತ್ ಉತ್ಪಾದನೆ ಮಾಡಲು ಸಾಕಷ್ಟು ಭೂಮಿ ಬೇಕಾಗುತ್ತದೆ. ಆದರೆ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತವಾಗುತ್ತದೆ. ಇಂತಹ ಯೋಜನೆಗಳಿಗೆ ಇದೇ ದೊಡ್ಡ ತೊಡಕು’ ಎಂದರು.</p>.<p>‘ಈ ಯೋಜನೆಗಳಿಂದ ತಮಗೆ ತೊಂದರೆಯಾಗುತ್ತದೆ ಎಂದು ಜನರು ವಿರೋಧ ವ್ಯಕ್ತಪಡಿಸುತ್ತಾರೆ. ಹೂಡಿಕೆದಾರರು ಅದನ್ನೇ ದೊಡ್ಡ ತೊಡಕು ಎಂದು ಪರಿಗಣಿಸುತ್ತಾರೆ. ನವೀಕರಿಸಬಹುದಾದ ಇಂಧನ ಮೂಲಗಳೇ ದೇಶದ ಭವಿಷ್ಯ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಟ್ಟರೆ, ಇಂತಹ ಯೋಜನೆಗಳ ಅನುಷ್ಠಾನ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ’ ಎಂದರು.</p>.<p>ಕ್ರೆಡಲ್ ಅಧ್ಯಕ್ಷ ಮತ್ತು ಶಾಸಕ ಟಿ.ಡಿ.ರಾಜೇಗೌಡ, ‘ಈ ಕ್ಷೇತ್ರದಲ್ಲಿ ರಾಜ್ಯವು ಉತ್ತಮ ಸಾಧನೆ ಮಾಡಿದ್ದು, ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಬಜೆಟ್ನಲ್ಲಿ ‘ಮುಖ್ಯಮಂತ್ರಿ ಸೌರಶಕ್ತಿ ಯೋಜನೆ’ಯನ್ನು ಘೋಷಿಸಲಾಗಿದ್ದು, ಈ ಸ್ವರೂಪದ ಎಲ್ಲ ಯೋಜನೆಗಳನ್ನೂ ಅದು ಒಳಗೊಳ್ಳಲಿದೆ’ ಎಂದರು.</p>.<p>‘ಅಭಿವೃದ್ಧಿಪರ ಯೋಜನೆಗಳ ರೂಪುರೇಷೆ ಮತ್ತು ಅನುಷ್ಠಾನದ ಗುಣಮಟ್ಟ ಹೆಚ್ಚಿಸಬೇಕಾದ ಅಗತ್ಯವಿದೆ. ಲೋಪಗಳನ್ನು ಸರಿಪಡಿಸಿಕೊಂಡು, ಹೂಡಿಕೆದಾರರು ಮತ್ತು ಜನರ ಮಧ್ಯೆ ಸಮನ್ವಯ ಸಾಧಿಸಬೇಕಿದೆ’ ಎಂದರು.</p>.<p>ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಯ್ಯ, ಸಿಇಇಡಬ್ಲ್ಯು ನಿರ್ದೇಶಕ ಕಾರ್ತಿಕ್ ಗಣೇಶ್, ಇಂಧನ ಇಲಾಖೆ ಅಧಿಕಾರಿಗಳು, ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>