<p><strong>ಪೀಣ್ಯ ದಾಸರಹಳ್ಳಿ:</strong> ಚಿಕ್ಕಬಾಣಾವರದ ರಾಘವೇಂದ್ರ ಬಡಾವಣೆಯ ರಾಘವೇಂದ್ರ ಪವನ್ ಮಂದಿರದಲ್ಲಿ ವಿಶ್ವ ವೀರಶೈವ ಲಿಂಗಾಯತ ವೇದಿಕೆ ಹಾಗೂ ವೀರಶೈವ ಲಿಂಗಾಯತ ವೇದಿಕೆಯಿಂದ ಬಸವ ಹಾಗೂ ರೇಣುಕಾಚಾರ್ಯ ಜಯಂತಿ ನಡೆಯಿತು.</p>.<p>ಇದೇ ವೇಳೆ ವೀರಶೈವ ಲಿಂಗಾಯತ ವಟುಗಳಿಗೆ ಉಚಿತ ಲಿಂಗದೀಕ್ಷೆ ನೆರವೇರಿಸಲಾಯಿತು. ಸಮುದಾಯದ ಹಿರಿಯರಿಗೆ ಸನ್ಮಾನ ಮತ್ತು ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಯುವಕರಿಗೆ ಸನ್ಮಾನ ಮಾಡಲಾಯಿತು. ಬಸವೇಶ್ವರರ ಮತ್ತು ರೇಣುಕಾಚಾರ್ಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಯಿತು.</p>.<p>ವೀರ ಧರ್ಮಸಿಂಹಾಸನ ಸಂಸ್ಥಾನ ಮಠದ ಪಟ್ಟದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಖಾನಿ ಮಠದ ಬಸವರಾಜ ಸ್ವಾಮೀಜಿ, ಬಸವಜ್ಞಾನ ಸೆಂಟರ್ ಅಧ್ಯಕ್ಷ ಓಂಕಾರೇಶ್ವರಿ ಅವರು ಮಾತನಾಡಿದರು.</p>.<p>ವೇದಿಕೆ ಅಧ್ಯಕ್ಷ ಎಂ.ಎಚ್.ಪಾಟೀಲ, ಸಾಹಿತಿ ವೈ.ಬಿ.ಎಚ್ ಜಯದೇವ್, ಉಪನ್ಯಾಸಕಿ ಸುಜಾತಾ ಮೇಲೇಗೌಡ, ರವಿಕುಮಾರ್, ಸೋಲಾರ್ ಸುಬ್ಬಣ್ಣ, ಗಂಗಾಧರ ಸ್ವಾಮಿ, ಪದಾಧಿಕಾರಿಗಳಾದ ರವಿಕುಮಾರ್, ಕಾಂತರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಚಿಕ್ಕಬಾಣಾವರದ ರಾಘವೇಂದ್ರ ಬಡಾವಣೆಯ ರಾಘವೇಂದ್ರ ಪವನ್ ಮಂದಿರದಲ್ಲಿ ವಿಶ್ವ ವೀರಶೈವ ಲಿಂಗಾಯತ ವೇದಿಕೆ ಹಾಗೂ ವೀರಶೈವ ಲಿಂಗಾಯತ ವೇದಿಕೆಯಿಂದ ಬಸವ ಹಾಗೂ ರೇಣುಕಾಚಾರ್ಯ ಜಯಂತಿ ನಡೆಯಿತು.</p>.<p>ಇದೇ ವೇಳೆ ವೀರಶೈವ ಲಿಂಗಾಯತ ವಟುಗಳಿಗೆ ಉಚಿತ ಲಿಂಗದೀಕ್ಷೆ ನೆರವೇರಿಸಲಾಯಿತು. ಸಮುದಾಯದ ಹಿರಿಯರಿಗೆ ಸನ್ಮಾನ ಮತ್ತು ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಯುವಕರಿಗೆ ಸನ್ಮಾನ ಮಾಡಲಾಯಿತು. ಬಸವೇಶ್ವರರ ಮತ್ತು ರೇಣುಕಾಚಾರ್ಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಯಿತು.</p>.<p>ವೀರ ಧರ್ಮಸಿಂಹಾಸನ ಸಂಸ್ಥಾನ ಮಠದ ಪಟ್ಟದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಖಾನಿ ಮಠದ ಬಸವರಾಜ ಸ್ವಾಮೀಜಿ, ಬಸವಜ್ಞಾನ ಸೆಂಟರ್ ಅಧ್ಯಕ್ಷ ಓಂಕಾರೇಶ್ವರಿ ಅವರು ಮಾತನಾಡಿದರು.</p>.<p>ವೇದಿಕೆ ಅಧ್ಯಕ್ಷ ಎಂ.ಎಚ್.ಪಾಟೀಲ, ಸಾಹಿತಿ ವೈ.ಬಿ.ಎಚ್ ಜಯದೇವ್, ಉಪನ್ಯಾಸಕಿ ಸುಜಾತಾ ಮೇಲೇಗೌಡ, ರವಿಕುಮಾರ್, ಸೋಲಾರ್ ಸುಬ್ಬಣ್ಣ, ಗಂಗಾಧರ ಸ್ವಾಮಿ, ಪದಾಧಿಕಾರಿಗಳಾದ ರವಿಕುಮಾರ್, ಕಾಂತರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>