<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳು ನಗರದ ಸಿಸಿಎಚ್ 57ನೇ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಾದರು.</p>.<p>ಆರೋಪಿಗಳಿಗೆ ಜಾಮೀನು ನೀಡುವ ವೇಳೆ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 25ಕ್ಕೆ ಮುಂದೂಡಿದರು.</p>.<p>ದರ್ಶನ್ ತಮ್ಮ ಆಪ್ತ, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದರು. ಅವರೊಂದಿಗೆ ವಕೀಲರು ಸಹ ಇದ್ದರು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬಳಿಕ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ನ್ಯಾಯಾಲಯದಲ್ಲಿ ಮುಖಾಮುಖಿಯಾದರು.</p>.<p>ದರ್ಶನ್ ನೋಡುತ್ತಿದ್ದಂತೆ ಪವಿತ್ರಾ ಭಾವುಕರಾದರು. ಪವಿತ್ರಾ ಅವರ ಬೆನ್ನುತಟ್ಟಿ ದರ್ಶನ್ ಸಂತೈಸಿದರು. ಕೆಲ ಹೊತ್ತು ಇಬ್ಬರು ಮಾತುಕತೆ ನಡೆಸಿದರು. ಈ ವೇಳೆ ದರ್ಶನ್ ಅವರ ಆರೋಗ್ಯವನ್ನು ವಿಚಾರಿಸಿದರು. ಮಾಧ್ಯಮಗಳು ಅವರನ್ನು ಸುತ್ತುವರಿಯುತ್ತಿದ್ದಂತೆ ಇಬ್ಬರೂ ಅಲ್ಲಿಂದ ಹೊರ ನಡೆದರು.</p>.<p>ಜನವರಿ 12ರಿಂದ ಐದು ದಿನ ಮೈಸೂರಿಗೆ ತೆರಳಲು ದರ್ಶನ್ಗೆ ನ್ಯಾಯಾಲಯ ಅನುಮತಿ ನೀಡಿದೆ. </p>.<p>ಇದೇ ವೇಳೆ ಹೊರ ರಾಜ್ಯದ ದೇವಾಲಯಗಳಿಗೆ ತೆರಳಲು ಅನುಮತಿ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಮನವಿಗೂ ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೇ ವ್ಯಾವಹಾರಿಕ ಕೆಲಸಗಳ ನಿಮಿತ್ತ ದೆಹಲಿ, ಮುಂಬೈಗೆ ತೆರಳಲು ಅನುಮತಿ ನೀಡಿದೆ.</p>.<p>ಮತ್ತೊಬ್ಬ ಆರೋಪಿ ನಾಗರಾಜ್ಗೆ ಜನವರಿ 10 ರಿಂದ ಫೆಬ್ರುವರಿ 24ರವರೆಗೆ ಮೈಸೂರಿಗೆ ತೆರಳಲು ಅನುಮತಿ ನೀಡಲಾಗಿದೆ. ಚಿತ್ರದುರ್ಗದ ಆರೋಪಿಗಳಿಗೂ ತಮ್ಮ ಊರಿಗೆ ಹೋಗಲು ಅನುಮತಿ ಕೊಡಲಾಗಿದೆ.</p>.<p>ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿದ ಬಳಿಕ ಆರೋಪಿಗಳು ಅವರ ವಕೀಲರೊಂದಿಗೆ ಚರ್ಚಿಸಿ ವಾಪಸ್ ಆದರು.</p>.ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಗೆ ಹೈಕೋರ್ಟ್ನಿಂದ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳು ನಗರದ ಸಿಸಿಎಚ್ 57ನೇ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಾದರು.</p>.<p>ಆರೋಪಿಗಳಿಗೆ ಜಾಮೀನು ನೀಡುವ ವೇಳೆ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 25ಕ್ಕೆ ಮುಂದೂಡಿದರು.</p>.<p>ದರ್ಶನ್ ತಮ್ಮ ಆಪ್ತ, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದರು. ಅವರೊಂದಿಗೆ ವಕೀಲರು ಸಹ ಇದ್ದರು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬಳಿಕ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ನ್ಯಾಯಾಲಯದಲ್ಲಿ ಮುಖಾಮುಖಿಯಾದರು.</p>.<p>ದರ್ಶನ್ ನೋಡುತ್ತಿದ್ದಂತೆ ಪವಿತ್ರಾ ಭಾವುಕರಾದರು. ಪವಿತ್ರಾ ಅವರ ಬೆನ್ನುತಟ್ಟಿ ದರ್ಶನ್ ಸಂತೈಸಿದರು. ಕೆಲ ಹೊತ್ತು ಇಬ್ಬರು ಮಾತುಕತೆ ನಡೆಸಿದರು. ಈ ವೇಳೆ ದರ್ಶನ್ ಅವರ ಆರೋಗ್ಯವನ್ನು ವಿಚಾರಿಸಿದರು. ಮಾಧ್ಯಮಗಳು ಅವರನ್ನು ಸುತ್ತುವರಿಯುತ್ತಿದ್ದಂತೆ ಇಬ್ಬರೂ ಅಲ್ಲಿಂದ ಹೊರ ನಡೆದರು.</p>.<p>ಜನವರಿ 12ರಿಂದ ಐದು ದಿನ ಮೈಸೂರಿಗೆ ತೆರಳಲು ದರ್ಶನ್ಗೆ ನ್ಯಾಯಾಲಯ ಅನುಮತಿ ನೀಡಿದೆ. </p>.<p>ಇದೇ ವೇಳೆ ಹೊರ ರಾಜ್ಯದ ದೇವಾಲಯಗಳಿಗೆ ತೆರಳಲು ಅನುಮತಿ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಮನವಿಗೂ ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೇ ವ್ಯಾವಹಾರಿಕ ಕೆಲಸಗಳ ನಿಮಿತ್ತ ದೆಹಲಿ, ಮುಂಬೈಗೆ ತೆರಳಲು ಅನುಮತಿ ನೀಡಿದೆ.</p>.<p>ಮತ್ತೊಬ್ಬ ಆರೋಪಿ ನಾಗರಾಜ್ಗೆ ಜನವರಿ 10 ರಿಂದ ಫೆಬ್ರುವರಿ 24ರವರೆಗೆ ಮೈಸೂರಿಗೆ ತೆರಳಲು ಅನುಮತಿ ನೀಡಲಾಗಿದೆ. ಚಿತ್ರದುರ್ಗದ ಆರೋಪಿಗಳಿಗೂ ತಮ್ಮ ಊರಿಗೆ ಹೋಗಲು ಅನುಮತಿ ಕೊಡಲಾಗಿದೆ.</p>.<p>ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿದ ಬಳಿಕ ಆರೋಪಿಗಳು ಅವರ ವಕೀಲರೊಂದಿಗೆ ಚರ್ಚಿಸಿ ವಾಪಸ್ ಆದರು.</p>.ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಗೆ ಹೈಕೋರ್ಟ್ನಿಂದ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>