<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಂದ ಜಪ್ತಿ ಮಾಡಿದ್ದ ₹82 ಲಕ್ಷ ಹಣವನ್ನು ಆದಾಯ ತೆರಿಗೆ (ಐ.ಟಿ) ಇಲಾಖೆಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಆದೇಶಿಸಿದೆ.</p><p>ಕೊಲೆ ಪ್ರಕರಣದ ತನಿಖೆ ವೇಳೆ ಆರೋಪಿ ದರ್ಶನ್ ಮನೆ ಹಾಗೂ ಇತರೆ ಸ್ಥಳಗಳಲ್ಲಿ ಈ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.</p>.<p>ಆರೋಪಿಗಳು ಹಣದ ಮೂಲದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಐ.ಟಿ ಇಲಾಖೆಗೆ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ. ಹಣದ ಮೂಲವನ್ನು ಐ.ಟಿ ಅಧಿಕಾರಿಗಳು ಪತ್ತೆಹಚ್ಚಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.</p>.<p>ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಐವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಡಿಯೊ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಬುಧವಾರ ಹಾಜರಾದರು. ದರ್ಶನ್ ಅವರು ಬ್ಯಾರಕ್ನಲ್ಲಿ ಟಿ.ವಿ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.</p>.<p>ತಮ್ಮನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಆರೋಪಿಗಳಾದ ಜಗದೀಶ್ ಹಾಗೂ ಅನುಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.</p>.<p>ರೇಣುಕಸ್ವಾಮಿ ಅವರ ಪೋಷಕರಿಗೆ ವಿಚಾರಣೆ ಸಂಬಂಧ ಸಮನ್ಸ್ ಜಾರಿ ಮಾಡುವ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಡಿ.17ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಂದ ಜಪ್ತಿ ಮಾಡಿದ್ದ ₹82 ಲಕ್ಷ ಹಣವನ್ನು ಆದಾಯ ತೆರಿಗೆ (ಐ.ಟಿ) ಇಲಾಖೆಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಆದೇಶಿಸಿದೆ.</p><p>ಕೊಲೆ ಪ್ರಕರಣದ ತನಿಖೆ ವೇಳೆ ಆರೋಪಿ ದರ್ಶನ್ ಮನೆ ಹಾಗೂ ಇತರೆ ಸ್ಥಳಗಳಲ್ಲಿ ಈ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.</p>.<p>ಆರೋಪಿಗಳು ಹಣದ ಮೂಲದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಐ.ಟಿ ಇಲಾಖೆಗೆ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ. ಹಣದ ಮೂಲವನ್ನು ಐ.ಟಿ ಅಧಿಕಾರಿಗಳು ಪತ್ತೆಹಚ್ಚಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.</p>.<p>ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಐವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಡಿಯೊ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಬುಧವಾರ ಹಾಜರಾದರು. ದರ್ಶನ್ ಅವರು ಬ್ಯಾರಕ್ನಲ್ಲಿ ಟಿ.ವಿ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.</p>.<p>ತಮ್ಮನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಆರೋಪಿಗಳಾದ ಜಗದೀಶ್ ಹಾಗೂ ಅನುಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.</p>.<p>ರೇಣುಕಸ್ವಾಮಿ ಅವರ ಪೋಷಕರಿಗೆ ವಿಚಾರಣೆ ಸಂಬಂಧ ಸಮನ್ಸ್ ಜಾರಿ ಮಾಡುವ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಡಿ.17ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>